ನಂದಿಹಳ್ಳಿ ಪಂಚಾಯತ್ ಮೂಲಸೌಕರ್ಯ ಕಲ್ಪಿಸಲು ಆಗ್ರಹ
Nandihalli Panchayat demands to provide infrastructure
ನಂದಿಹಳ್ಳಿ ಪಂಚಾಯತ್ ಮೂಲಸೌಕರ್ಯ ಕಲ್ಪಿಸಲು ಆಗ್ರಹ
ಹೂವಿನಹಡಗಲಿ 25:ತಾಲ್ಲೂಕಿನ ನಂದಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಗ್ರಾ.ಪಂ. ಅಧ್ಯಕ್ಷೆ ಶೈನಾಜ್ ಬೀ, ಉಪಾಧ್ಯಕ್ಷ ಬಿ. ರವಿಕುಮಾರ್ ಒತ್ತಾಯಿಸಿದ್ದಾರೆ.ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಂ. ಉಮೇಶ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿ, ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ.ಗ್ರಾ.ಪಂ ವ್ಯಾಪ್ತಿಯ ನಂದಿಹಳ್ಳಿ, ಹುಗಲೂರು, ಮುದೇನೂರು ಗ್ರಾಮಗಳಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿನಸಮಸ್ಯೆ ತಲೆದೋರುವ ಲಕ್ಷಣಗಳು ಗೋಚರಿಸಿವೆ. ಚರಂಡಿಗಳನ್ನು ಸ್ವಚ್ಛಗೊಳಿಸದೇ ನೈರ್ಮಲ್ಯ ಹಾಳಾಗಿದೆ. ಬೀದೀದೀಪ ಸಮಸ್ಯೆಯೂ ಇದೆ ಎಂದು ತಿಳಿಸಿದರು.ಮೂರು ಗ್ರಾಮಗಳ ಸಾರ್ವಜನಿಕರು ಚುನಾಯಿತ ಸದಸ್ಯರಿಗೆ ತರಾಟೆ ತೆಗೆದು ಕೊಳ್ಳುತ್ತಿದ್ದಾರೆ. ಕೆಲವು ದಿನಗಳಿಂದ ಪಂಚಾಯಿತಿಗೆ ಕಾಯಂ ಪಿಡಿಒ ನಿಯೋಜಿಸದೇ ಇರುವುದೇ ಇದಕ್ಕೆ ಕಾರಣವಾಗಿದ್ದು, ತಕ್ಷಣ ಪಿಡಿಒ ನಿಯೋಜಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮನವಿ ಮಾಡಿದ್ದಾರೆ.ಪ್ರಶಾಂತ ಹಾಗೂ ಸಾರ್ವಜನಿಕರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 