ನಂದಿಹಳ್ಳಿ ಪಂಚಾಯತ್ ಮೂಲಸೌಕರ್ಯ ಕಲ್ಪಿಸಲು ಆಗ್ರಹ
Nandihalli Panchayat demands to provide infrastructure
ನಂದಿಹಳ್ಳಿ ಪಂಚಾಯತ್ ಮೂಲಸೌಕರ್ಯ ಕಲ್ಪಿಸಲು ಆಗ್ರಹ
ಹೂವಿನಹಡಗಲಿ 25:ತಾಲ್ಲೂಕಿನ ನಂದಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಗ್ರಾ.ಪಂ. ಅಧ್ಯಕ್ಷೆ ಶೈನಾಜ್ ಬೀ, ಉಪಾಧ್ಯಕ್ಷ ಬಿ. ರವಿಕುಮಾರ್ ಒತ್ತಾಯಿಸಿದ್ದಾರೆ.ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎಂ. ಉಮೇಶ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿ, ಸಮಸ್ಯೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ.ಗ್ರಾ.ಪಂ ವ್ಯಾಪ್ತಿಯ ನಂದಿಹಳ್ಳಿ, ಹುಗಲೂರು, ಮುದೇನೂರು ಗ್ರಾಮಗಳಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿನಸಮಸ್ಯೆ ತಲೆದೋರುವ ಲಕ್ಷಣಗಳು ಗೋಚರಿಸಿವೆ. ಚರಂಡಿಗಳನ್ನು ಸ್ವಚ್ಛಗೊಳಿಸದೇ ನೈರ್ಮಲ್ಯ ಹಾಳಾಗಿದೆ. ಬೀದೀದೀಪ ಸಮಸ್ಯೆಯೂ ಇದೆ ಎಂದು ತಿಳಿಸಿದರು.ಮೂರು ಗ್ರಾಮಗಳ ಸಾರ್ವಜನಿಕರು ಚುನಾಯಿತ ಸದಸ್ಯರಿಗೆ ತರಾಟೆ ತೆಗೆದು ಕೊಳ್ಳುತ್ತಿದ್ದಾರೆ. ಕೆಲವು ದಿನಗಳಿಂದ ಪಂಚಾಯಿತಿಗೆ ಕಾಯಂ ಪಿಡಿಒ ನಿಯೋಜಿಸದೇ ಇರುವುದೇ ಇದಕ್ಕೆ ಕಾರಣವಾಗಿದ್ದು, ತಕ್ಷಣ ಪಿಡಿಒ ನಿಯೋಜಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮನವಿ ಮಾಡಿದ್ದಾರೆ.ಪ್ರಶಾಂತ ಹಾಗೂ ಸಾರ್ವಜನಿಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 