ನರಸಿಂಹವಾಡಿ ದತ್ತಜಯಂತಿ ಉತ್ಸವ ಗೊಡಚಿ ವೀರಭದ್ರೇಶ್ವರ ಜಾತ್ರೆ: ಹೆಚ್ಚುವರಿ ಬಸ್ಸುಗಳ ಕಾರ್ಯಾಚರಣೆ
Narasimhwadi Datta Jayanti Utsav Godachi Veerbhadreshwar Jatra: Operation of Additional Buses
ನರಸಿಂಹವಾಡಿ ದತ್ತಜಯಂತಿ ಉತ್ಸವ ಗೊಡಚಿ ವೀರಭದ್ರೇಶ್ವರ ಜಾತ್ರೆ: ಹೆಚ್ಚುವರಿ ಬಸ್ಸುಗಳ ಕಾರ್ಯಾಚರಣೆ
ಚಿಕ್ಕೋಡಿ 09: ಹೊಸ್ತಿಲ ಹುಣ್ಣಿಮೆ ನಿಮಿತ್ಯ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ಜಾತ್ರೆ ದಿ. 12 ರಿಂದ 16ರವರೆಗೆ ಹಾಗೂ ದಿ.15ರಂದು ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಕುರಂದವಾಡ ತಾಲೂಕಿನ ನರಸಿಂಹವಾಡಿ ದತ್ತಜಯಂತಿ ಉತ್ಸವ ಜರುಗಲಿದೆ.
ಗೊಡಚಿ ವೀರಭದ್ರೇಶ್ವರ ಜಾತ್ರೆಗೆ ಹೋಗುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಚಿಕ್ಕೋಡಿ ವಿಭಾಗದ ಗೋಕಾಕ ಘಟಕದಿಂದ ದಿ.12ರಿಂದ ದಿ. 16ರವರೆಗೆ ಜಾತ್ರಾ ಪ್ರಯುಕ್ತ ಗೊಡಚಿವರೆಗೆ ಹಾಗೂ ದಿ.15ರಂದು ನಿಪ್ಪಾಣಿ ಹಾಗೂ ಚಿಕ್ಕೋಡಿ ಘಟಕಗಳಿಂದ ನರಸಿಂಹವಾಡಿ ದತ್ತಜಯಂತಿ ಉತ್ಸವಕ್ಕೆ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು.
ಗೊಡಚಿ ಜಾತ್ರಾ ಹೆಚ್ಚುವರಿ ವಾಹನಗಳ ಕಾರ್ಯಾಚರಣೆಗಾಗಿ ಗೋಕಾಕ ಬಸ್ ನಿಲ್ದಾಣ ಹಾಗೂ ಗೊಡಚಿ ಜಾತ್ರಾ ಕೇಂದ್ರದಲ್ಲಿ ಹಾಗೂ ನರಸಿಂಹವಾಡಿ ದತ್ತಜಯಂತಿ ಉತ್ಸವ ಪ್ರಯುಕ್ತ ನಿಪ್ಪಾಣಿ ಬಸ್ ನಿಲ್ದಾಣ ಹಾಗೂ ನರಸಿಂಹವಾಡಿಯಲ್ಲಿ ನುರಿತ ಸಾರಿಗೆ ನಿಯಂತ್ರಕರನ್ನು ನಿಯೋಜಿಸಿ ಪ್ರತ್ಯೇಕ ನಿಯಂತ್ರಣ ಬಿಂದುಗಳ ವ್ಯವಸ್ಥೆ ಮಾಡಿ ಜಾತ್ರೆಗೆ ತೆರಳುವ ಪ್ರಯಾಣಿಕರಿಗೆ ವ್ಯವಸ್ಥಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಸಾರ್ವಜನಿಕ ಪ್ರಯಾಣಿಕರು ಈ ಜಾತ್ರಾ ವಿಶೇಷ ಹೆಚ್ಚುವರಿ ಸಾರಿಗೆಗಳ ಪ್ರಯೋಜನ ಪಡೆಯಲು ವಾಕರಸಾಸಂಸ್ಥೆ, ಚಿಕ್ಕೋಡಿ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಕೋರಲಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 