ನರಸಿಂಹವಾಡಿ ದತ್ತಜಯಂತಿ ಉತ್ಸವ ಗೊಡಚಿ ವೀರಭದ್ರೇಶ್ವರ ಜಾತ್ರೆ: ಹೆಚ್ಚುವರಿ ಬಸ್ಸುಗಳ ಕಾರ್ಯಾಚರಣೆ
Narasimhwadi Datta Jayanti Utsav Godachi Veerbhadreshwar Jatra: Operation of Additional Buses
ನರಸಿಂಹವಾಡಿ ದತ್ತಜಯಂತಿ ಉತ್ಸವ ಗೊಡಚಿ ವೀರಭದ್ರೇಶ್ವರ ಜಾತ್ರೆ: ಹೆಚ್ಚುವರಿ ಬಸ್ಸುಗಳ ಕಾರ್ಯಾಚರಣೆ
ಚಿಕ್ಕೋಡಿ 09: ಹೊಸ್ತಿಲ ಹುಣ್ಣಿಮೆ ನಿಮಿತ್ಯ ಕ್ಷೇತ್ರ ಗೊಡಚಿ ವೀರಭದ್ರೇಶ್ವರ ಜಾತ್ರೆ ದಿ. 12 ರಿಂದ 16ರವರೆಗೆ ಹಾಗೂ ದಿ.15ರಂದು ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಕುರಂದವಾಡ ತಾಲೂಕಿನ ನರಸಿಂಹವಾಡಿ ದತ್ತಜಯಂತಿ ಉತ್ಸವ ಜರುಗಲಿದೆ.
ಗೊಡಚಿ ವೀರಭದ್ರೇಶ್ವರ ಜಾತ್ರೆಗೆ ಹೋಗುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಚಿಕ್ಕೋಡಿ ವಿಭಾಗದ ಗೋಕಾಕ ಘಟಕದಿಂದ ದಿ.12ರಿಂದ ದಿ. 16ರವರೆಗೆ ಜಾತ್ರಾ ಪ್ರಯುಕ್ತ ಗೊಡಚಿವರೆಗೆ ಹಾಗೂ ದಿ.15ರಂದು ನಿಪ್ಪಾಣಿ ಹಾಗೂ ಚಿಕ್ಕೋಡಿ ಘಟಕಗಳಿಂದ ನರಸಿಂಹವಾಡಿ ದತ್ತಜಯಂತಿ ಉತ್ಸವಕ್ಕೆ ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು.
ಗೊಡಚಿ ಜಾತ್ರಾ ಹೆಚ್ಚುವರಿ ವಾಹನಗಳ ಕಾರ್ಯಾಚರಣೆಗಾಗಿ ಗೋಕಾಕ ಬಸ್ ನಿಲ್ದಾಣ ಹಾಗೂ ಗೊಡಚಿ ಜಾತ್ರಾ ಕೇಂದ್ರದಲ್ಲಿ ಹಾಗೂ ನರಸಿಂಹವಾಡಿ ದತ್ತಜಯಂತಿ ಉತ್ಸವ ಪ್ರಯುಕ್ತ ನಿಪ್ಪಾಣಿ ಬಸ್ ನಿಲ್ದಾಣ ಹಾಗೂ ನರಸಿಂಹವಾಡಿಯಲ್ಲಿ ನುರಿತ ಸಾರಿಗೆ ನಿಯಂತ್ರಕರನ್ನು ನಿಯೋಜಿಸಿ ಪ್ರತ್ಯೇಕ ನಿಯಂತ್ರಣ ಬಿಂದುಗಳ ವ್ಯವಸ್ಥೆ ಮಾಡಿ ಜಾತ್ರೆಗೆ ತೆರಳುವ ಪ್ರಯಾಣಿಕರಿಗೆ ವ್ಯವಸ್ಥಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಸಾರ್ವಜನಿಕ ಪ್ರಯಾಣಿಕರು ಈ ಜಾತ್ರಾ ವಿಶೇಷ ಹೆಚ್ಚುವರಿ ಸಾರಿಗೆಗಳ ಪ್ರಯೋಜನ ಪಡೆಯಲು ವಾಕರಸಾಸಂಸ್ಥೆ, ಚಿಕ್ಕೋಡಿ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಕೋರಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 