ರಾಷ್ಟ್ರೀಯ ಗಣಿತ ದಿನಾಚರಣೆ ಕಾರ್ಯಕ್ರಮ - 2025
National Mathematics Day Celebration Program - 2025
ಬಾಗಲಕೋಟ 22: ನಮ್ಮ ಸಂಸ್ಥೆಯಲ್ಲಿ ದಿ. 22ರಂದು ರಾಷ್ಟ್ರೀಯ ಗಣಿತ ದಿನಾಚರಣೆ 2025 ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಎಸ್. ಎಸ್. ಹುಬ್ಬಳ್ಳಿಯವರು ವಹಿಸಿಕೊಂಡಿದ್ದರು, ವಿಜ್ಞಾನ ವಿಭಾಗದ ಮುಖ್ಯಸ್ಥೆ ಜಯಶ್ರೀ ಗದ್ದಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಜಗತ್ಪ್ರಸಿದ್ದ ಶ್ರೇಷ್ಠ ಗಣಿತಜ್ಞ ಡಾ. ಶ್ರೀನಿವಾಸ್ ರಾಮಾನುಜನರ ಜನ್ಮ ದಿನಾಚರಣೆಯ ನಿಮಿತ್ಯವಾಗಿ ದೇಶಾದ್ಯಂತ ‘ಗಣಿತ ದಿನ’ ವನ್ನು ಆಚರಿಸಲಾಗುತ್ತಿದ್ದು ರಾಮಾನುಜನರ ಸಾಧನೆಗಳು ಇಂದಿನ ವಿದ್ಯಾರ್ಥಿಗಳಿಗೆ ದಾರೀದೀಪಗಳಾಗಿವೆ ಎಂದು ತಿಳಿಸಿದರು.
ಪ್ರಾಚಾರ್ಯರಾದ ಎಸ್. ಎಸ್. ಹುಬ್ಬಳ್ಳಿಯವರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ವೃದ್ಧಿಸಿಲು ಇಂತಹ ಮಹಾನುಭಾವರ ದಿನಾಚರಣೆಯನ್ನು ಹಮ್ಮಿಕೊಂಡು ಅವರ ಸಾಧನೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕೆಂದು ಸಲಹೆ ನೀಡಿದರು ಕಾರ್ಯಕ್ರಮದಲ್ಲಿ ರಾಮಾನುಜನರ ಜೀವನ ಸಾಧನೆಗಳ ಕುರಿತು ವೀಡಿಯೋ ಪ್ರದರ್ಶನ ಮಾಡಲಾಯಿತು ಕಾರ್ಯಕ್ರಮವನ್ನು ಸ್ಮಿತಾ ಪೂಜಾರ ನಿರೂಪಿಸಿದರು ಹಾಗೂ ಕೊನೆಯಲ್ಲಿ ಎಂ. ಕೆ. ಚವಡಿಯವರು ವಂದಿಸಿದರು. ಈ ಕಾರ್ಯಕ್ರಮದಲ್ಲಿ ಗಣಿತ ವಿಷಯದ ಮೇಲೆ ವಿದ್ಯಾರ್ಥಿಗಳಿಗಾಗಿ ರಸ ಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರುಗಳು ಹಾಗೂ ಸಿಬ್ಬಂದಿವರ್ಗದವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 