ವಿಠಲ್ ನಾಯ್ಕ ಅವರಿಗೆ ರಾಷ್ಟ್ರೀಯ ಸಮಾಜ ಭೂಷಣ ಪ್ರಶಸ್ತಿ
National Samaj Bhushan Award for Vittal Naik
ಲೋಕದರ್ಶನ ವರದಿ
ಮಾಂಜರಿ 02: ರಾಜರ್ಷಿ ಛತ್ರಪತಿ ಶಾಹು ಮಹಾರಾಜ ಜಯಂತಿ ನಿಮಿತ್ತ ಕೊಲ್ಲಾಪುರದಲ್ಲಿ ಮಹಾರಾಷ್ಟ್ರ ರಾಜ್ಯ ಅರ್ಹ ಕಾರ್ಮಿಕರ ಸಂಘ ಮತ್ತು ನಾಗರಿಕ ಸೇವಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ವಿಠಲ ನಾಯಿಕ ಅವರಿಗೆ ರಾಷ್ಟ್ರೀಯ ಸಮಾಜಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೊ. ನಾಯಿಕ ಅವರ ಶಿಕ್ಷಣ, ಸಾಮಾಜಿಕ ಸೇವೆ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿನ ಕಾರ್ಯವನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಲ್ಲಾಪುರ ಸಂಸದ ಛತ್ರಪತಿ ಶಾಹು ಮಹಾರಾಜ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಸತೇಜ್ ಪಾಟೀಲ, ಸಂಘದ ಅಧ್ಯಕ್ಷ ಸುರೇಶ ಕೇಸರಕರ ಮತ್ತು ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು. ನಿಪ್ಪಾಣಿ ತಾಲೂಕಿನ ಭೀಮಾಪುರವಾಡಿ ಮೂಲದರಾಗಿದ್ದು, ಪ್ರಸ್ತುತ ಚಿಕ್ಕೋಡಿಯಲ್ಲಿವಾಸಿಸುತ್ತಿರುವ ಪ್ರೊ. ವಿಠಲ್ ನಾಯಕ್ ಅವರಿಗೆ ಸಿಎಂ ಡಿ.ಎಡ್ ಮಹಾವಿದ್ಯಾಲಯದಲ್ಲಿ ಉಪಪ್ರಾಂಶುಪಾಲರಾಗಿ ಮತ್ತು ಉತ್ತೂರಿನ ಡಾ. ಜೆ.ಪಿ. ನಾಯಿಕ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 