ರಾಷ್ಟ್ರೀಯ ಸೇವಾ ಯೋಜನೆ: ಹತ್ತರಗಿಯ ಕಾರೀಮಠದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ
National Service Scheme: Cleanliness programme at the premises of Karimath, Hataragi
ಯಮಕನಮರಡಿ 22: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಎರಡನೇ ದಿನ ಹತ್ತರಗಿಯ ಕಾರೀಮಠದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಆವರಣವನ್ನು ಅಚ್ಚುಕಟ್ಟಾಗಿ ಸ್ವಚ್ಛಗೊಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯರಾದ ಹನುಮಂತ ಗಾಡಿ ವಡ್ಡರ್, ಕಾಂಗ್ರೆಸ್ ಮುಖಂಡರು ಪಾಂಡುರಂಗ ಗಾಡಿ ವಡ್ಡರ್ರವರು ಹಾಜರಿದ್ದು ಶಿಬಿರಾರ್ಥಿಗಳ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘೀಸಿದರು. ಅದರಂತೆ ಶಿಬಿರದಲ್ಲಿ ಮದ್ಯಾಹ್ನದ ನಂತರ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ನಿಮ್ಹಾನ್ಸ ನ ಎಪಿಡಿಮಿಯಾಲಜಿ ವಿಭಾಗ ಹಾಗೂ ಯುವ ಸ್ಪಂಧನ ಕೇಂದ್ರ ಬೆಳಗಾವಿ ಯುವ ಸಮಾಲೋಚಕರಾದ ಕುಮಾರ ಖೋತ, ಯುವ ಪರಿವರ್ತಕರಾದ ಸರಸ್ವತಿ ಗುರುಪಾದಗೋಳ ಹಾಗೂ ಡಿ.ಎ.ಎಸ್.ಎಪ್.ಬೆಳಗಾವಿಯ ಬಾಳಯ್ಯ ಮಠಪತಿ ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಜೀವನ ಕೌಶಲ್ಯಗಳನ್ನು ತಿಳಿಸಿಕೊಟ್ಟಿರುವುದು ವಿಶೇಷವಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪನ್ಯಾಸಕ ಎ.ಎ.ಕಿವಂಡಾ ವಹಿಸಿದ್ದರು. ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಸಹ ಕಾರ್ಯಕ್ರಮ ಅಧಿಕಾರಿ ಎಸ್.ಆರ್ ತಬರಿ ಈ ಸಂದರ್ಭದಲ್ಲಿ ಹಾಜರಿದ್ದರು. ಕಾರ್ಯಮವನ್ನು ಶಿಬಿರಾರ್ಥಿಗಳೆ ಸಂಘಟಿಸಿ ನಿರೂಪಣೆ ಹಾಗೂ ವಂದನೆಗಳನ್ನು ಸಲ್ಲಿಸಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 