ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ
National Tobacco Control Programme
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ
ಜಮಖಂಡಿ, 21 : ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ, ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿಗಳಿಗೆ ಭೇಟಿ ನೀಡಿ. ತಂಬಾಕು ಸೇವನೆಯಿಂದ ದುಷ್ಪರಿಣಾಮಗಳು ಮತ್ತು ಕಾನುನೂ ಅರಿವು ಮೂಡಿಸುವ ಜೊತೆಗೆ ವಿದ್ಯಾರ್ಥಿಗಳು ಕೆಂಪು ಗುಲಾಬಿ ಹೂವನ್ನು ನೀಡಿ. ಕರಪತ್ರಗಳನ್ನು ವಿತರಿಸಿ ಜಾಗೃತಿಯನ್ನು ಮೂಡಿಸಿದರು.ಕೋಟ್ಪಾ-2003 ರ ಕಾಯ್ದೆಯ ಸೆಕ್ಷನ್ 6(ಬಿ) ಯ ನಿಬಂಧನೆಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ಜಾತಾ ಮೂಲಕ ಶಿಕ್ಷಣ ಸಂಸ್ಥೆಗಳ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುತ್ತಿರುವ ಅಂಗಡಿಗಳಿಗೆ ಭೇಟಿ ನೀಡಿ ತಂಬಾಕು ಮಾರಾಟಗಾರರಿಗೆ ಅದರ ದುಷ್ಪರಿಣಾಮಗಳ ಬಗ್ಗೆ ವಿವರಿಸಿ ಮಾರಾಟ ಮಾಡದಂತೆ ವಿನಂತಿ ಮಾಡಿಕೊಂಡರು. ತಾಲೂಕು ಆರೋಗ್ಯ ಅಧಿಕಾರಿಗಳು ಡಾ. ಜಿ.ಎಸ್. ಗಲಗಲಿ ಅವರು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತಂಬಾಕು ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.
ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ವೀರಭದ್ರ್ಪ ಜಿ.ಎಮ್. ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಉಮೇಶ ಜೋಶಿ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕಾಂತ ಕುಮಟಳ್ಳಿ, ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಚಲವಾದಿ, ಶಿವಲಿಂಗ, ತಾಲೂಕು ಆರೋಗ್ಯ ಸಿಬ್ಬಂದಿಗಳಾದ ಸಂತೋಷ ನಾಯಕ, ಮಲ್ಲು ಅಸ್ಕಿ, ರವಿ ಪಾಟೀಲ, ರವಿ ಕಾಂಬಳೆ, ಶಂಕರ ಮಡಿವಾಳಯ್ಯ, ಎಸ್,ಎಮ್. ಕೋರಿ, ಅನೀಲ ಸೊರಗೊಂಡ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 