ಟೆಕ್ವಾಂಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
National level selection in the sport of Taekwondo
ಟೆಕ್ವಾಂಡೋ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಧಾರವಾಡ 12: ನಗರದ ಜಿಲ್ಲಾ ಟೆಕ್ವಾಂಡೋ ಅಸೋಸಿಯೆಶನ್ ನ ಅಂಜಲಿ ಪರ್ಪ ಮತ್ತು ಪರ್ಪ ಕೆ. ಅವರ ಮಾರ್ಗದರ್ಶನದಲ್ಲಿ ಟೆಕ್ವಾಂಡೋ ತರಬೇತಿ ಹೊಂದಿದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಮಿಂಚಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಡಿ.5 ಮತ್ತು 6 ರಂದು ಹಾವೇರಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜುಗಳ 2024-25 ನೇ ಸಾಲಿನ ರಾಜ್ಯಮಟ್ಟದ ಟೆಕ್ವಾಂಡೋ ಪಂದ್ಯಾವಳಿಯಲ್ಲಿ ಧಾರವಾಡ ಜಿಲ್ಲೆಯಿಂದ ಸ್ಪರ್ಧಿಸಿ ಬಾಲಕರ ವಿಭಾಗದಲ್ಲಿ ಸಾಯಿಪ್ರಸಾದ ಪಿ.ಕೆ ಮತ್ತು ಬಾಲಕೀಯರ ವಿಭಾಗದಲಿ ಪ್ರೀಯಾ ಬಿ ವೆಂಕಟಾಪೂರ ಪ್ರಥಮ ಸ್ಥಾನದಲ್ಲಿ ಮಿಂಚಿ ಬಂಗಾರದ ಪದಕ ಪಡೆಯುವುದರೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ.
ಇವರು ಮುಂಬರುವ ಯು-19 ನ್ಯಾಶನಲ್ ಸ್ಕೂಲ್ ಗೇಮ್ಸ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿ ಧಾರವಾಡ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರಿಗೆ ಜಿಲ್ಲಾ ಟೆಕ್ವಾಂಡೋ ಅಸೋಸಿಯೆಶನ್ ಮತ್ತು ಪಾಲಕರು ಅಭಿನಂದಿಸಿದ್ದಾರೆ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 