ರಾಷ್ಟ್ರೀಯ ಬಾಯಿ ಕ್ಯಾನ್ಸರ್ ದಿನ
ಬೆಳಗಾವಿ 07: ವಂಟಮರಿ ಗ್ರಾಮದಲ್ಲಿ ಕೆ ಎಲ್ ಇ ಜವಾಹರಲಾಲ್ ವೈದ್ಯಕೀಯ ವಿದ್ಯಾಲಯದ ಪಬ್ಲಿಕ್ ಹೆಲ್ತ್ ವಿಭಾಗ ಮತ್ತು ಎನ್ ಎಸ್ ಎಸ್ ಘಟಕ 9 ಹಾಗೂ ಇಂಡಿಯನ್ ಡೆಂಟಲ್ ಅಸೋಸಿಯೇಶನ್ ಬೆಳಗಾವಿ ವಿಭಾಗ ಇವರ ಸಹಯೋಗದಲ್ಲಿ ರಾಷ್ಟ್ರೀಯ ಬಾಯಿ ಕ್ಯಾನ್ಸರ್ ದಿನ ಆಚರಿಸಲಾಯಿತು. ವಂಟಮುರಿ ಗ್ರಾಮದ ಜನರಿಗೆ ಬಾಯಿ ಕ್ಯಾನ್ಸರ್ನ ಪರೀಕ್ಷೆ ನಡೆಸಲಾಯಿತು. ಡಾ ಜಯಂತ್ ಧನವಂತ ಎಲ್ಲರನ್ನು ಸ್ವಾಗತಿಸಿದರು, ಎನ್ ಎಸ್ ಎಸ್ ಅಧಿಕಾರಿಗಳಾದ ಡಾ ಅಶ್ವಿನಿ ನರಸಣ್ಣವರ್ ಅವರು ಬಾಯಿ ಕ್ಯಾನ್ಸರ್ನ ಕುರಿತು ಅರಿವು ಮೂಡಿಸಿ ಪ್ರಾಥಮಿಕ ಚಿಕಿತ್ಸೆ ಕುರಿತಾಗಿ ಜಾಗೃತಿ ಮೂಡಿಸಿದರು. ಡಾ ಸಚಿನ್ ಶಿವನಾಯ್ಕರ್ ಅವರು ಬಾಯಿಯ ಸ್ವಚ್ಛತೆಯ ಬಗ್ಗೆ ಮಾತನಾಡಿದರು. ಡಾ ಸುಮಂತ್ ಗೋಯಲ್ , ಡಾ ಜಗದೀಶ್ ಕದಮ್ಮನವರ್ ಮತ್ತು ಡಾ ಸುಧಾ ಕುಂಬಾರ್ ಉಪಸ್ಥಿತರಿದ್ದರು. ಶ್ರೀಮತಿ ಸವಿತಾ ವಂದನಾರ್ಪಣೆಗೈದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 