ಪಾಲಿಕೆ ಅಧಿಕಾರಿಗಳ ನಿರ್ಲಕ್ಷಯ: ಅಪಾರ ನೀರು ಪೋಲು
ಲೋಕದರ್ಶನ ವರದಿ
ಬೆಳಗಾವಿ 9, ನಗರದ ಚನ್ನಮ್ಮ ವೃತ್ತದ ಬಳಿ ಅಪಾರ ನೀರು ಪೋಲಾಗುತ್ತಿದೆ. ಇತ್ತ ಕುಡಿಯುವ ನೀರಿನ ಕೊರತೆ ಇದ್ದಾಗಲೇ ಅತ್ತ ಅಷ್ಟೊಂದು ನೀರು ರಸ್ತೆಯ ಮೇಲೆ ಹರಿದು ಚರಂಡಿ ಸೇರುತ್ತಿದೆ. ನೀರು ಪೋಲಾಗುವದರ ಜೊತೆಗೆ ರಸ್ತೆ ಸಂಚಾರದಲ್ಲಿರುವ ದ್ವಿಚಕ್ರ ವಾಹನದಾರರಿಗೂ ಕಂಟಕವಾಗಿದೆ. ವೃತ್ತದ ತಿರುವಿನಲ್ಲಿ ನೀರು ಹರಿದು ಹೋಗುತ್ತಿರುವುದರಿಂದ ದ್ವಿಚಕ್ರ ವಾಹಗಳು ತಿರುವಿನಲ್ಲಿ ಸಂಚರಿಸುವಾಗ ವಾಹನದ ಜಕ್ರಗಳು ಜಾರುವ ಸಂಭವವಿದ್ದು, ಸವಾರರು ಬಿದ್ದು ಪ್ರಾಣ ಹಾನಿಯಾಗುವ ಸಂಭವವೂ ಇದೆ.
ಹತ್ತಿರದಲ್ಲಿಯೇ ಜಿಲ್ಲಾಧಿಕಾರಿಗಳ ಕಚೇರಿ, ನ್ಯಾಯಾಲಯ, ಪೊಲೀಸ ಚೌಕಿಗಳಿವೆ. ಎಲ್ಲ ಅಧಿಕಾರಿಗಳು ಇದೇ ಮಾರ್ಗವಾಗಿ ತಮ್ಮ ಕಚೇರಿ-ಕೆಲಸಗಳಿಗೆ ಹೋಗಬೇಕು. ಆದರೂ ಯಾರೋಬ್ಬ ಅಧಿಕಾರಿಗಳ ಕಣ್ಣಿಗೂ ಇದು ಕಂಡುಬಂದಿಲ್ಲವೇ? ಅಥವಾ ಕಂಡರೂ ಕಾಣದಂತೆ ವತರ್ಿಸುತ್ತಿರುವರೇ?
ನಗರದ ಆಡಳಿತ ಮಂಡಳಿ ಆದಷ್ಟೂ ಬೇಗನೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ನೀರು ಪೋಲಾಗದಂತೆ ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿದೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 