ನೂತನ ಮಹಾತ್ಮಾ ಗಾಂಧಿಜಿ ಪುತ್ಥಳಿ ಅನಾವರಣ
New Mahatma Gandhi statue unveiled
ಸಿಂದಗಿ 24: ಇದೇ 26 ರಂದು ಸಾಯಂಕಾಲ 5 ಗಂಟೆಗೆ ನೂತನ ಮಹಾತ್ಮಾ ಗಾಂಧಿಜಿ ಪುತ್ಥಳಿ ಅನಾವರಣ, ರಾಷ್ಟ್ರೀಯ ಲಾಂಛನ ಅಶೋಕ ಸ್ಥಂಭ ಲೋಕಾರೆ್ಣ, ನಗರಸಭೆ ಕಾರ್ಯಾಲಯ, ಸರಕಾರಿ ಆಸ್ಪತ್ರೆಗೆ ಹೈಟೆಕ್ ಅಂಬುಲೆನ್ಸ ಚಾಲನೆ, ಹಾಗೂ ಡಯಾಲಿಸಿಸ್ ಸೆಂಟರ್, ಪಿಡಿಯಾಟ್ರಿಕ್ ಐಸಿಯು ಇವುಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲರು ಉದ್ಘಾಟಿಸಲಿದ್ದಾರೆ ಕಾರಣ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ ಅಶೋಕ ಮನಗೂಳಿ ಕರೆ ನೀಡಿದರು.
ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗಾಂಧಿಜಿ ವೃತ್ತದಲ್ಲಿ ಆಯೋಜಿಸಲಾದ ಕಾರ್ಯಕ್ರಮದ ಸಾನಿಧ್ಯತೆಯನ್ನು ಸೊನ್ನ ದಾಸೋಹ ವಿರಕ್ತಮಠದ ಡಾ. ಶಿವಾನಂದ ಮಹಾಸ್ವಾಮಿಗಳು, ಧಮ್ಮ ವಿಹಾರದ ಸಂಘಪಾಲ ಬಂತೇಜಿ, ಹುಲಿಜಂತಿ ಸುಕ್ಷೇತ್ರದ ಪಟ್ಟದ ಪೂಜಾರಿ ಮಾಳಿಂಗರಾಯ ಮಹಾರಾಜರು ವಹಿಸಲಿದ್ದಾರೆ ಎಂದು ತಿಳಿಸಿದ ಅವರು, ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ 5ನೇ ಪುಣ್ಯ ಸ್ಮರಣೆ ನಿಮಿತ್ಯ ಎಂ.ಸಿ.ಮನಗೂಳಿ ಪ್ರತಿಷ್ಠಾನದವತಿಯಿಂದ 27 ಮತ್ತು 28 ರಂದು ಭಗೀರಥ ಕಪ್ ಹೊನಲು ಬೆಳಕಿನ ವಾಲೀಬಾಲ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.
ಇಲ್ಲಿ ಕರ್ನಾಟಕ ರಾಜ್ಯ ಪೊಲೀಸ್, ಎ.ಎಸ್.ಸಿ ಬೆಂಗಳೂರು, ಕರ್ನಾಟಕ ಪೋಸ್ಟಲ್, ಸ್ಪೋರ್ಟ್ಸ ಹಾಸ್ಟೇಲ್, ಎಸ್.ಡಿ.ಎಂ ಉಜಿರೆ, ಸೌತ್ ಸೆಂಟ್ರಲ್ ರೇಲ್ವೆ ಹುಬ್ಬಳ್ಳಿ ರಾಜ್ಯದ 6 ತಂಡಗಳು, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹಾಗೂ ಏಕಲವ್ಯ ಪುರಷ್ಕೃತರು ಪಂಧ್ಯಾವಳಿಗಳಲ್ಲಿ ಬಾಗವಹಿಸಲಿದ್ದಾರೆ.
ಪ್ರಥಮ ರೂ 1ಲಕ್ಷ, ದ್ವೀತಿಯ ರೂ 75 ಸಾವಿರ, ತೃತೀಯ ರೂ.50 ಸಾವಿರ, 4ನೇ ಬಹುಮಾನ ರೂ 25 ಸಾವಿರ ಹಾಗೂ ಭಗೀರಥ ಕಪ್ ಇಡಲಾಗಿದೆ. ಕಾರಣ ಕ್ರೀಡಾಭಿಮಾನಿಗಳು ಕ್ರೀಡೆಗೆ ಪ್ರೋತ್ಸಾಹ ನೀಡಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ ಪೂಜಾರಿ, ವೈ.ಸಿ.ಮಯೂರ, ಪ್ರವೀಣ ಕಂಠಿಗೊಂಡ ಇದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 