ಕುಮ್ಮೂರು ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾಲಯ ಉದ್ಘಾಟನೆ
New veterinary clinic inaugurated in Kummur village
ಕುಮ್ಮೂರು ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾಲಯ ಉದ್ಘಾಟನೆ
ಬ್ಯಾಡಗಿ. 07 : ತಾಲೂಕಿನ ಕುಮ್ಮೂರು ಗ್ರಾಮದಲ್ಲಿ ಇಂದು ನೂತನ ಪಶು ಚಿಕಿತ್ಸಾಲೆಯನ್ನು ಶಾಸಕ ಬಸವರಾಜ್ ಶಿವಣ್ಣನವರ್ ಉದ್ಘಾಟಿಸಿದರು ಬಳಿಕ ಮಾತನಾಡಿದವರು ನಾನು ಕಳೆದ ಬಾರಿ ಶಾಸಕನಾಗಿದ್ದಾಗಿಂದ ಗ್ರಾಮಸ್ಥರ ಬೇಡಿಕೆ ಪಶು ಆಸ್ಪತ್ರೆಯ ಮಾಡಿಸಿಕೊಡುವಂತೆ ಬೇಡಿಕೆ ಇಟ್ಟಿದ್ದರು ಸತತವಾಗಿ ಪ್ರಯತ್ನದಿಂದ ಮತ್ತೆ ಈ ಬಾರಿ ಶಾಸಕನಾಗಿ ಅವರ ಬೇಡಿಕೆಯನ್ನು ಇಂದು ಈಡೇರಿಸಿದ್ದೇನೆ ಎಂದು ಹೇಳಿದರು.
ರಾಜ್ಯ ಸರಕಾರ ಕೃಷಿ ಹಾಗೂ ಹೈನುಗಾರಿಕೆಗೆ ವಿಶೇಷ ಆದ್ಯತೆ ನೀಡುತ್ತಾ ಬಂದಿದೆ. ರಾಜ್ಯದಲ್ಲಿ ಈಗ ಹೈನುಗಾರಿಕೆ ಲಾಭದಾಯಕ ಉದ್ಯಮವಾಗಿದೆ. ಒಬ್ಬ ವೈದ್ಯರು ಮತ್ತು ಇಬ್ಬರು ಸಿಬ್ಬಂದಿಯಿದ್ದಾರೆ. ದೂರುಗಳು ಬಾರದ ರೀತಿಯಲ್ಲಿ ಜನಪರ ಕೆಲಸಗಳನ್ನು ಮಾಡಬೇಕಿದೆ. ಜಿಲ್ಲಾ ಪಶುಸಂಗೋಪನೆ ಕೇಂದ್ರಕ್ಕೆ ಇನ್ನೂ ಹಲವು ಸಿಬ್ಬಂದಿಯ ಅಗತ್ಯವಿದೆ. ರಾಜ್ಯದ ಪಶು ಚಿಕಿತ್ಸಾಲಯಗಳಲ್ಲಿರುವ ವೈದ್ಯರ ಕೊರತೆ ಬಗ್ಗೆ ಈಗಾಗಲೇ ಸರಕಾರದ ಗಮನಸೆಳೆಯಲಾಗಿದೆ.
ಪಶು ವೈದ್ಯರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದರು. ರೈತರು ತಮ್ಮ ಜಾನುವಾರುಗಳನ್ನು ಪಶು ಆಸ್ಪತ್ರೆಗೆ ಕೊಂಡೊಯ್ಯುವ ಅಗತ್ಯವಿಲ್ಲ ಈಗಾಗಲೇ ಸರ್ಕಾರವು ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯವಾಣಿ 1962 ಕ್ಕೆ ಕರೆ ಮಾಡಿದರೆ ಸಾಕು ಜಾನುವಾರು ಎಲ್ಲಿ ಇರುತ್ತದೆ ಅಲ್ಲಿ ಪಶು ಇಲಾಖೆಯ ವಾಹನವು ಸಂಚಾರಿ ಚಿಕಿತ್ಸಾಲಯ ವಾಹನವು ಮನೆಬಾಗಿಲಿಗೆ ಬರಲಿದೆ ಅದರಲ್ಲಿ ಪಶು ವೈದ್ಯರು ತಜ್ಞ ಸಿಬ್ಬಂದಿ ಉಪಕರಣ ಓಷಧಿ ಹೊತ್ತು ಅಲ್ಲಿಯೇ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಕಾರಣ ಪ್ರತಿಯೊಬ್ಬರೂ ಇದರ ಸಪಯೋಗ ತೆಗೆದುಕೊಳ್ಳಬೇಕು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 