ವಿದೇಶಿ ಗಣ್ಯರ ಭೇಟಿಗಿಲ್ಲ ಅವಕಾಶ; ರಾಹುಲ್
No chance to meet foreign dignitaries: Rahul
ನವದೆಹಲಿ: ಕೇಂದ್ರ ಸರ್ಕಾರಕ್ಕೆ ಅಭದ್ರತೆ ಕಾಡುತ್ತಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡದಂತೆ ದೇಶಕ್ಕೆ ಭೇಟಿ ನೀಡುವ ಗಣ್ಯರಿಗೆ ಸೂಚನೆ ನೀಡುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಗುರುವಾರ) ಆರೋಪಿಸಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.
ದೇಶಕ್ಕೆ ಭೇಟಿ ನೀಡುವ ಗಣ್ಯರು ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುವುದು ವಾಡಿಕೆಯಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವಾಲಯವು ಈ ಶಿಷ್ಟಾಚಾರವನ್ನು ಪಾಲಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಈ ಸಂಪ್ರದಾಯವು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮನಮೋಹನ್ ಸಿಂಗ್ ಅವರ ಅಧಿಕಾರದ ಅವಧಿಯಲ್ಲಿ ನಡೆಯುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವಿದೇಶಿ ಗಣ್ಯರು ದೇಶಕ್ಕೆ ಬಂದು ಹೋಗುವಾಗ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗದಂತೆ ಸರ್ಕಾರವೇ ಸೂಚಿಸುತ್ತದೆ ಎಂದು ಹೇಳಿದ್ದಾರೆ.
ಅದು ಅವರ ನೀತಿಯಾಗಿದೆ. ನಾನು ವಿದೇಶಕ್ಕೆ ಹೋಗುವಾಗ ಅಥವಾ ವಿದೇಶದ ಗಣ್ಯರು ಇಲ್ಲಿಗೆ ಬರುವಾಗ ಅದನ್ನೇ ಮಾಡುತ್ತಾರೆ. ನಿಮ್ಮನ್ನು ಭೇಟಿಯಾಗದಂತೆ ಸರ್ಕಾರದ ಸೂಚನೆಯಿದೆ ಎಂಬ ಸಂದೇಶ ನನಗೆ ಬರುತ್ತದೆ ಎಂದು ರಾಹುಲ್ ಹೇಳಿದ್ದಾರೆ.
ವಿದೇಶದ ಗಣ್ಯರು ವಿರೋಧ ಪಕ್ಷದ ನಾಯಕರೊಂದಿಗಿನ ಸಭೆಯ ಮಹತ್ವವನ್ನು ಒತ್ತಿ ಹೇಳಿರುವ ರಾಹುಲ್, ನಾವು ಕೂಡ ದೇಶವನ್ನು ಪ್ರತಿನಿಧಿಸುತ್ತೇವೆ ಎಂದು ಹೇಳಿದ್ದಾರೆ.
ರಾಹುಲ್ ಹೇಳಿಕೆಯನ್ನು ಬೆಂಬಲಿಸಿರುವ ಸೋದರಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸರ್ಕಾರಕ್ಕೆ ಅಭದ್ರತೆ ಕಾಡುತ್ತಿದೆ. ಇದೇ ಕಾರಣಕ್ಕಾಗಿ ಶಿಷ್ಟಾಚಾರ ಉಲ್ಲಂಘನೆಯಾಗುತ್ತಿದೆ ಎಂದು ಹೇಳಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 