ಸಮಾಜದ ಸ್ವಾಸ್ಥ್ಯ ಹಾಳುಗೆಡುವುದು ಬೇಡ: ಬಿಸನಕೊಪ್ಪ
ಲೋಕದರ್ಶನ ವರದಿ
ಮುಧೋಳ 21:ಸೌಹಾರ್ದಯುತ ಸಂಬಂಧಗಳನ್ನು ಹೊಂದಿರುವ ಬಣಜಿಗ ಹಾಗೂ ಪಂಚಮಸಾಲಿ ಲಿಂಗಾಯತ ಸಮಾಜಗಳಲ್ಲಿ ಯಾವುದೇ ರೀತಿಯಲ್ಲಿ ಸ್ವಾಸ್ಥ್ಯ ಹಾಳುಗೆಡವಲು ಪ್ರಯತ್ನ ಮಾಡಬಾರದು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ
ಬಿ. ಬಿ. ಬಿಸನಕೊಪ್ಪ ಹೇಳಿದರು.
ನಗರದ ಕಾನಿಪ ಸಂಘದ ಕಾಯರ್ಾಲಯದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಬಾಗಲಕೋಟ ಜಿಲ್ಲಾ ಪಂಚಾಯತ ಅಧ್ಯಕ್ಷೆ ವೀಣಾ ಕಾಶಪ್ಪನವರ ಕೇವಲ ಉದಾಹರಣೆಯಾಗಿ ಹೇಳಿದ ಕಿತ್ತೂರ ರಾಣಿ ಚನ್ನಮ್ಮನ ಇತಿಹಾಸದಲ್ಲಿ ಮಲ್ಲಪ್ಪ ಶೆಟ್ಟರನ್ನು ಅವಹೇಳನ ಮಾಡಿದರೆಂದು ಕೆಲವರು ತಮ್ಮ ಸ್ವಹಿತಾಸಕ್ತಿಗೋಸ್ಕರ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿರುವುದು ಕಂಡು ಬಂದಿದೆ. ಬಣಜಿಗ ಹಾಗೂ ಪಂಚಮಸಾಲಿ ಸಮಾಜದಲ್ಲಿ ಸಾಕಷ್ಟು ಸಂಬಂಧಗಳು ಸಹ ಏರ್ಪಟ್ಟಿದ್ದು ಸಮಾಜ ಒಂದೇ ಎಂದೇ ಪರಿಗಣಿತವಾಗಿದೆ. ದಯವಿಟ್ಟು ಸಮಾಜದ ಮಧ್ಯೆ ಸೌಹಾರ್ದ ಏರ್ಪಡಿಸಬೇಕೆ ಹೊರತು ಯಾವುದೇ ವೈಷಮ್ಯ ಮೂಡಿಸುವ ಪ್ರಯತ್ನ ಮಾಡಬಾರದು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದಶರ್ಿ ಎ. ಎಸ್. ಚೌಧರಿ, ಎಸ್. ಬಿ. ದಾನಪ್ಪಗೋಳ, ರಾಮನಗೌಡ ನಾಡಗೌಡ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 