ಜೆಡಿಎಸ್ ಜೊತೆ ಹೋಗಲು ಸಿದ್ಧರಿಲ್ಲ: ಕೋಟ ಶ್ರೀನಿವಾಸ ಪೂಜಾರಿ
ಬೆಂಗಳೂರು 12: ಜೆಡಿಎಸ್ ಮುಖಂಡ ಹಾಗೂ ಸಚಿವ ಸಾ.ರಾ. ಮಹೇಶ್ ಜೊತೆ ಕೆ.ಎಸ್. ಈಶ್ವರಪ್ಪ ಭೇಟಿ ಸಾಂದಭರ್ಿಕ ಮತ್ತು ಆಕಸ್ಮಿಕ. ಇದಕ್ಕೆ ಯಾವುದೇ ಅರ್ಥ ಕಲ್ಪಿಸಬೇಕಿಲ್ಲ ಎಂಬುದನ್ನು ಈಗಾಗಲೇ ಸ್ಪಷ್ಪಪಡಿಸಲಾಗಿದೆ.
ಜೆಡಿಎಸ್ ಜೊತೆಗೆ ಹೋಗಲು ನಾವು ಮಾನಸಿಕವಾಗಿ ಸಿದ್ಧರಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸದಲ್ಲಿ ಮೊದಲ ಬಾರಿಗೆ ಬಹುಮತವಿಲ್ಲದ ಸರಕಾರವನ್ನು ವಿಪಕ್ಷ ಸದನದಲ್ಲಿ ಎದುರಿಸುತ್ತಿದೆ.
ಆಡಳಿತ ನಡೆಸಲು ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಬಹುಮತ ಇಲ್ಲದ ಕಾರಣ ಅವಿಶ್ವಾಸದ ಪ್ರಶ್ನೆಯೇ ಇಲ್ಲ.
ಸರಕಾರ ರಾಜೀನಾಮೆ ಕೊಡಬೇಕು ಎಂದು ಅವರು ಒತ್ತಾಯಿಸಿದರು. ಬಿಜೆಪಿ ರಾಜ್ಯ ಉಸ್ತುವಾರಿ ಕೆ.ಮುರಳೀಧರ ರಾವ್ ಮತ್ತು ಶಾಸಕ ಕೆ.ಎಸ್.ಈಶ್ವರಪ್ಪ ಅವರನ್ನು ಜೆಡಿಎಸ್ನ ಸಚಿವ ಸಾ.ರಾ.ಮಹೇಶ್ ಗುರುವಾರ ರಾತ್ರಿ ನಗರದ ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿಯಾಗಿದ್ದರು. ಇದು ರಾಜಕೀಯ ವಲಯದಲ್ಲಿ ಹಲವು ಊಹಾಪೋಹ, ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 