ವಾಕರಸಾಸಂ ಹುಬ್ಬಳ್ಳಿಯಲ್ಲಿ ಓಬವ್ವಳ ಜಯಂತಿ ಆಚರಣೆ
Obavvala Jayanti Celebration in Vakarasasam Hubli
ಹುಬ್ಬಳ್ಳಿ 11: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಕೇಂದ್ರ ಕಛೇರಿ, ಹುಬ್ಬಳ್ಳಿಯಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿಯ ಅಂಗವಾಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ದೀಪ ಬೆಳಗಿಸುವುದರ ಮೂಲಕ ಜಯಂತಿಯನ್ನು ದಿ. 11ಂದು ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ವಿರೂಪಾಕ್ಷ ಕಟ್ಟಿಮನಿರವರು, ಒಬ್ಬ ಸಾಮಾನ್ಯ ಮಹಿಳೆ ತನ್ನ ರಾಜ್ಯವನ್ನು ಹೇಗೆ ಕಾಪಾಡಬಹುದು ಎಂಬುದನ್ನು ತೋರಿಸಿಕೊಟ್ಟ ವೀರನಾರಿ, ಒನಕೆ ಓಬವ್ವಳು ಹೈದರಾಲಿ ಸೈನಿಕರನ್ನು ಒನಕೆಯಿಂದ ಹೊಡೆದುರುಳಿಸಿ ಸಾಹಸ ಮೆರೆದವಳು. ವೀರ ವನಿತೆ ಓಬವ್ವಳ ಜಯಂತಿ ಆಚರಣೆ ಮಾಡುವ ಮೂಲಕ ಅವರ ಧೈರ್ಯ ಹಾಗೂ ಸಾಹಸದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಇಲಾಖಾ ಮುಖ್ಯಸ್ಥರಾದ ವಿವೇಕಾನಂದ ವಿಶ್ವಜ್ಞ, ಗಣೇಶ ರಾಠೋಡ್, ಶಶಿಧರ ಕುಂಬಾರ, ಜಗದಂಬಾ ಕೋಪರ್ಡೆ, ಸುಮನಾ.ಯು, ನವೀನಕುಮಾರ ತಿಪ್ಪಾಜಿ ಹನುಮನಗೌಡರ, ದಯಾನಂದ ಪಾಟೀಲ, ಎಮ್.ಎಮ್.ಶಂಕರ್ಪ ಮತ್ತು ಕೇಂದ್ರ ಕಛೇರಿಯ ಇನ್ನಿತರ ಅಧಿಕಾರಿ/ಸಿಬ್ಬಂದಿಗಳು ಉಪಸ್ಥಿತರಿದ್ದರು. ವಿರೂಪಾಕ್ಷ ಕಟ್ಟಿಮನಿರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 