ರಸ್ತೆ ಸುಧಾರಣಾ ಕಾಮಗಾರಿಗೆ ಅಧಿಕೃತ ಚಾಲನೆ
Official launch of road improvement work
ಯರಗಟ್ಟಿ, 10 : ಸಮೀಪದ ಗುಡುಮಕೇರಿ ಗ್ರಾಮದಲ್ಲಿ 70 ಲಕ್ಷ ವೆಚ್ಚದ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು.ನಂತರ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ ನನ್ನ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಬೆಳಗಾವಿ ವತಿಯಿಂದ, ಗುಡಮಕೇರಿ ಕ್ರಾಸ್ನಿಂದ ಗುಡಮಕೇರಿ ಗ್ರಾಮದವರೆಗೆ ಸುಮಾರು ?70 ಲಕ್ಷ ವೆಚ್ಚದ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ.ಗುಡಮಕೇರಿ ಗ್ರಾಮಸ್ಥರ ದಶಕಗಳ ಬೇಡಿಕೆಯಾಗಿದ್ದ ಈ ರಸ್ತೆ ನಿರ್ಮಾಣದಿಂದ ಸಾರ್ವಜನಿಕರ ಹಾಗೂ ರೈತ ಬಾಂಧವರ ಸಂಚಾರಕ್ಕೆ ಅನುಕೂಲವಾಗಲಿದೆ.
ಸುಸಜ್ಜಿತ ರಸ್ತೆಗಳ ಮೂಲಕ ಕ್ಷೇತ್ರದ ಪ್ರತಿಯೊಂದು ಗ್ರಾಮವನ್ನೂ ಪ್ರಗತಿಯತ್ತ ಕೊಂಡೊಯ್ಯಲು ನಾವು ನಿರಂತರವಾಗಿ ಪ್ರೀತಿಸುತ್ತಿದ್ದೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ಇಲಾಖೆಯ ಅಧಿಕಾರಿಗಳಾದ ಎಚ್. ಎ. ಕದ್ರಾಪೂರಕರ, ಬಸವರಾಜ ಅಯ್ಯನಗೌಡ್ರ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಪ್ರಕಾಶ ವಾಲಿ, ಬಂಗಾರೆಪ್ಪ ಹರಳಿ, ಉಮೇಶ ಮಾಗುಂಡನವರ, ರಾಜು ಯರಗಣವಿ, ಸತ್ಯನಾಯ್ಕ ನಾಯ್ಕರ, ಮಲಿಕಸಾಬ ಬಾಗವಾನ, ನಿಖಿಲ ಪಾಟೀಲ, ವಾಚಪೆ ಗುಡುಮಕೇರಿ, ಸತ್ಯಪ್ಪ ಆಡಕಾರ, ಫಕ್ಕೀರ್ಪ ಮಾದನ್ನವರ, ಭೀಮಶಿ ಪಾಟೀಲ, ಮಾರುತಿ ತಳವಾರ, ಹನಮಂತ ಶೆಟ್ಟೇಪ್ಪನ್ನವರ, ಶಿವಪ್ಪ ಪುಡಕಲಕಟ್ಟಿ ಸ್ಥಳೀಯ ಮುಖಂಡರು ಹಾಗೂ ಗ್ರಾಮದ ಹಿರಿಯರು ಮತ್ತು ಯುವ ಮಿತ್ರರು ಉಪಸ್ಥಿತರಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 