ರಸ್ತೆ ಸುಧಾರಣಾ ಕಾಮಗಾರಿಗೆ ಅಧಿಕೃತ ಚಾಲನೆ
Official launch of road improvement work
ಯರಗಟ್ಟಿ, 10 : ಸಮೀಪದ ಗುಡುಮಕೇರಿ ಗ್ರಾಮದಲ್ಲಿ 70 ಲಕ್ಷ ವೆಚ್ಚದ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು.ನಂತರ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ ನನ್ನ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಬೆಳಗಾವಿ ವತಿಯಿಂದ, ಗುಡಮಕೇರಿ ಕ್ರಾಸ್ನಿಂದ ಗುಡಮಕೇರಿ ಗ್ರಾಮದವರೆಗೆ ಸುಮಾರು ?70 ಲಕ್ಷ ವೆಚ್ಚದ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ.ಗುಡಮಕೇರಿ ಗ್ರಾಮಸ್ಥರ ದಶಕಗಳ ಬೇಡಿಕೆಯಾಗಿದ್ದ ಈ ರಸ್ತೆ ನಿರ್ಮಾಣದಿಂದ ಸಾರ್ವಜನಿಕರ ಹಾಗೂ ರೈತ ಬಾಂಧವರ ಸಂಚಾರಕ್ಕೆ ಅನುಕೂಲವಾಗಲಿದೆ.
ಸುಸಜ್ಜಿತ ರಸ್ತೆಗಳ ಮೂಲಕ ಕ್ಷೇತ್ರದ ಪ್ರತಿಯೊಂದು ಗ್ರಾಮವನ್ನೂ ಪ್ರಗತಿಯತ್ತ ಕೊಂಡೊಯ್ಯಲು ನಾವು ನಿರಂತರವಾಗಿ ಪ್ರೀತಿಸುತ್ತಿದ್ದೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ಇಲಾಖೆಯ ಅಧಿಕಾರಿಗಳಾದ ಎಚ್. ಎ. ಕದ್ರಾಪೂರಕರ, ಬಸವರಾಜ ಅಯ್ಯನಗೌಡ್ರ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಪ್ರಕಾಶ ವಾಲಿ, ಬಂಗಾರೆಪ್ಪ ಹರಳಿ, ಉಮೇಶ ಮಾಗುಂಡನವರ, ರಾಜು ಯರಗಣವಿ, ಸತ್ಯನಾಯ್ಕ ನಾಯ್ಕರ, ಮಲಿಕಸಾಬ ಬಾಗವಾನ, ನಿಖಿಲ ಪಾಟೀಲ, ವಾಚಪೆ ಗುಡುಮಕೇರಿ, ಸತ್ಯಪ್ಪ ಆಡಕಾರ, ಫಕ್ಕೀರ್ಪ ಮಾದನ್ನವರ, ಭೀಮಶಿ ಪಾಟೀಲ, ಮಾರುತಿ ತಳವಾರ, ಹನಮಂತ ಶೆಟ್ಟೇಪ್ಪನ್ನವರ, ಶಿವಪ್ಪ ಪುಡಕಲಕಟ್ಟಿ ಸ್ಥಳೀಯ ಮುಖಂಡರು ಹಾಗೂ ಗ್ರಾಮದ ಹಿರಿಯರು ಮತ್ತು ಯುವ ಮಿತ್ರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 