ರಸ್ತೆ ಸುಧಾರಣಾ ಕಾಮಗಾರಿಗೆ ಅಧಿಕೃತ ಚಾಲನೆ
Official launch of road improvement work
ಯರಗಟ್ಟಿ, 10 : ಸಮೀಪದ ಗುಡುಮಕೇರಿ ಗ್ರಾಮದಲ್ಲಿ 70 ಲಕ್ಷ ವೆಚ್ಚದ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಶಾಸಕ ವಿಶ್ವಾಸ ವೈದ್ಯ ಚಾಲನೆ ನೀಡಿದರು.ನಂತರ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ ನನ್ನ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಬೆಳಗಾವಿ ವತಿಯಿಂದ, ಗುಡಮಕೇರಿ ಕ್ರಾಸ್ನಿಂದ ಗುಡಮಕೇರಿ ಗ್ರಾಮದವರೆಗೆ ಸುಮಾರು ?70 ಲಕ್ಷ ವೆಚ್ಚದ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ.ಗುಡಮಕೇರಿ ಗ್ರಾಮಸ್ಥರ ದಶಕಗಳ ಬೇಡಿಕೆಯಾಗಿದ್ದ ಈ ರಸ್ತೆ ನಿರ್ಮಾಣದಿಂದ ಸಾರ್ವಜನಿಕರ ಹಾಗೂ ರೈತ ಬಾಂಧವರ ಸಂಚಾರಕ್ಕೆ ಅನುಕೂಲವಾಗಲಿದೆ.
ಸುಸಜ್ಜಿತ ರಸ್ತೆಗಳ ಮೂಲಕ ಕ್ಷೇತ್ರದ ಪ್ರತಿಯೊಂದು ಗ್ರಾಮವನ್ನೂ ಪ್ರಗತಿಯತ್ತ ಕೊಂಡೊಯ್ಯಲು ನಾವು ನಿರಂತರವಾಗಿ ಪ್ರೀತಿಸುತ್ತಿದ್ದೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ಇಲಾಖೆಯ ಅಧಿಕಾರಿಗಳಾದ ಎಚ್. ಎ. ಕದ್ರಾಪೂರಕರ, ಬಸವರಾಜ ಅಯ್ಯನಗೌಡ್ರ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶೀದಬಸನ್ನವರ, ಪ್ರಕಾಶ ವಾಲಿ, ಬಂಗಾರೆಪ್ಪ ಹರಳಿ, ಉಮೇಶ ಮಾಗುಂಡನವರ, ರಾಜು ಯರಗಣವಿ, ಸತ್ಯನಾಯ್ಕ ನಾಯ್ಕರ, ಮಲಿಕಸಾಬ ಬಾಗವಾನ, ನಿಖಿಲ ಪಾಟೀಲ, ವಾಚಪೆ ಗುಡುಮಕೇರಿ, ಸತ್ಯಪ್ಪ ಆಡಕಾರ, ಫಕ್ಕೀರ್ಪ ಮಾದನ್ನವರ, ಭೀಮಶಿ ಪಾಟೀಲ, ಮಾರುತಿ ತಳವಾರ, ಹನಮಂತ ಶೆಟ್ಟೇಪ್ಪನ್ನವರ, ಶಿವಪ್ಪ ಪುಡಕಲಕಟ್ಟಿ ಸ್ಥಳೀಯ ಮುಖಂಡರು ಹಾಗೂ ಗ್ರಾಮದ ಹಿರಿಯರು ಮತ್ತು ಯುವ ಮಿತ್ರರು ಉಪಸ್ಥಿತರಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 