ಬೀಜ ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ : ಮ್ಯಾಗೇರಿ
Officials should take precautions to avoid shortage of seeds and fertilizers: Mageri
ಬೀಜ ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ : ಮ್ಯಾಗೇರಿ
ಶಿಗ್ಗಾವಿ 21 : ಪ್ರಸಕ್ತ ಸಾಲಿನ ಮುಂಗಾರು ಪ್ರಾರಂಭವಾಗಿದ್ದು ಕೃಷಿ ಅಧಿಕಾರಿಗಳು ತಕ್ಷಣ ತಾಲೂಕಿನ ರೈತರಿಗೆ ಪರಿಶುದ್ಧವಾದ ಬೀಜ ಮತ್ತು ರಸಗೊಬ್ಬರವನ್ನು ವಿತರಣೆ ಮಾಡಬೇಕು ಎಂದು ಭಾರತೀಯ ಜನತಾ ಪಕ್ಷದ ನಿಕಟಪೂರ್ವ ತಾಲೂಕ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಹೇಳಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು ಅನೇಕ ಸಲ ಮುಗ್ಧ ರೈತರು ಕಳಪೆ ಬೀಜ ಗೊಬ್ಬರಕ್ಕೆ ಮೋಸ ಹೋಗಿದ್ದಾರೆ ಕಾರಣ ಕಳಪೆ ಬೀಜ ಮಾರಾಟ ಮಾಡಬಾರದೆಂದು ಮಾರಾಟಗಾರರಿಗೆ ಆದೇಶ ಮಾಡಬೇಕು ಕುದ್ದು ಕೃಷಿ ಅಧಿಕಾರಿಗಳು ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ತಾಕೀತು ಮಾಡಬೇಕು ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡದಂತೆ ಹಾಗೂ ಗೊಬ್ಬರದ ಜೊತೆಗೆ ಲಿಂಕ್ ತೆಗೆದುಕೊಂಡರೆ ಮಾತ್ರ ರಸಗೊಬ್ಬರ ಕೊಡುತ್ತೇವೆಂದು ಹೇಳಬಾರದು ಕೃಷಿ ಇಲಾಖೆಗೆ ಬಂದ ರೈತರಿಗೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿಗಳು ಎಫ್ ಐಡಿ ಮಾಡಿಸಿಕೊಂಡು ಬರದೆ ನಿಮಗೆ ಬೀಜ ಗೊಬ್ಬರ ಕೊಡುವುದಿಲ್ಲ ಎನ್ನದೆ ರೈತರನ್ನು ಅಲೆದಾಡಿಸದೆ ಬೇಕಾದ ಆಧಾರ್ ಕಾರ್ಡ್ ಉತಾರ ಬ್ಯಾಂಕ್ ಪಾಸ್ ಪುಸ್ತಕ ತೆಗೆದುಕೊಂಡು ನೀವೇ ಎಫ್ ಐಡಿ ಮಾಡಿ ಬಿತ್ತನೆ ಬೀಜ ವಿತರಣೆ ಮಾಡಬೇಕು ಎಂದರು ಸಾಕಷ್ಟು ದಾಸ್ತಾನು ಇದೆ ಎಂದು ಬಾಯಿ ಮಾತಲ್ಲಿ ಅಧಿಕಾರಿಗಳು ಹೇಳಿ ಜಾರಿ ಕೊಳ್ಳದೇ ರೈತರಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು ಒಂದು ವೇಳೆ ಬೀಜ ಗೊಬ್ಬರ ಕೊರತೆ ಆದರೆ ರೈತರೊಂದಿಗೆ ಕೃಷಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 