29ರಂದು ಡಾ ಡಿ.ಎಸ್. ಕರ್ಕಿ ಪ್ರಶಸ್ತಿ ಪ್ರದಾನ ಸಮಾರಂಭ
On 29th, Dr. D.S. Karki award ceremony
29ರಂದು ಡಾ ಡಿ.ಎಸ್. ಕರ್ಕಿ ಪ್ರಶಸ್ತಿ ಪ್ರದಾನ ಸಮಾರಂಭ
ಬೆಳಗಾವಿ 21: ಡಿಸೆಂಬರ್ 29ರಂದು ಡಾ ಡಿ.ಎಸ್. ಕರ್ಕಿ ಪ್ರಶಸ್ತಿ ಪ್ರದಾನ ಇಲ್ಲಿನ ಡಾ. ಡಿಎಸ್ ಕರ್ಕಿ ಪ್ರತಿಷ್ಠಾನ ಟ್ರಸ್ಟ್ ಪ್ರತಿ ವರ್ಷ ನೀಡುವ ಡಾ ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ 2024 ಗೆ ಪುರಸ್ಕೃತ 3 ಕೃತಿಗಳು ಆಯ್ಕೆಯಾಗಿವೆ. ಕುಮಾರಿ ಮಧು ಕಾರಗಿ, ಬ್ಯಾಡಗಿ ಇವರ ’ತೆರೆಯದ ಬಾಗಿಲು’ ಪ. ಗು. ಸಿದ್ದಾಪುರ, ಕೋಲಾರ ಇವರ ’ಅಕ್ಕರೆ ಅಜ್ಜ ನಾವು ಮತ್ತು ಗಾಂಧಿ ತಾತ’ ಹಾಗೂ ಸುಧಾ ಪಾಟೀಲ, ಬೆಳಗಾವಿ ಇವರ ’ಹೆಜ್ಜೆ ಗುರುತು’ ಕೃತಿಗಳು ಆಯ್ಕೆಯಾಗಿವೆ. ಪ್ರಶಸ್ತಿ ಪ್ರಧಾನ ಸಮಾರಂಭವು ರವಿವಾರ ದಿನಾಂಕ 29ರಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಲಿದೆ. ಗದಗಿನ ತೋಂಟದಾರ್ಯ ಮಠದ ಪೂಜ್ಯರು ಡಾ ಸಿದ್ದರಾಮ ಸ್ವಾಮೀಜಿಯವರು ಸಾನಿಧ್ಯ ನೀಡಲಿದ್ದಾರೆ.ಇವರೊಡನೆ ತಮ್ಮ ಕೃತಿಗಳನ್ನು ಕಳಿಸಿದ ಎಲ್ಲಾ ಕವಿಗಳಿಗೂ ಹಾರ್ದಿಕವಾಗಿ ಅಭಿನಂದಿಸುತ್ತೇವೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಪ್ರೊ ಗೀರೀಶ್ ಕರ್ಕಿ ಮತ್ತು ಸತೀಶ್ ಕರ್ಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 