ಡಿ.13ರಂದು ಅಲೆಮಾರಿ ಸಮುದಾಯ ಸಮಿತಿ ಬೆಳಗಾವಿ ಸುವರ್ಣ ಸೌಧ ಚಲೋ
On December 13, Alemari Community Committee Belagavi Suvarna Soudha Chalo
ಡಿ.13ರಂದು ಅಲೆಮಾರಿ ಸಮುದಾಯ ಸಮಿತಿ ಬೆಳಗಾವಿ ಸುವರ್ಣ ಸೌಧ ಚಲೋ
ಬಳ್ಳಾರಿ 05: ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಸೂಕ್ತ ಪ್ರಾತಿನಿಧ್ಯವನ್ನು ಪಡೆಯದೇ ಇರುವ 49 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಅಲೆಮಾರಿ ಸಮುದಾಯ ಗಳಿಗೆ ಶೇ 3ರಷ್ಟು ಒಳಮೀಸಲಾತಿ ಕಲ್ಪಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಇದೇ ಡಿ.13 ರಂದು ಬೆಳಗಾವಿಯ ಸುವರ್ಣಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಎಸ್.ಸಿ. ಎಸ್.ಟಿ., ಅಲೆಮಾರಿ ಬುಡಕಟ್ಟು ಮಹಾಸಭಾದ ಅಧ್ಯಕ್ಷ ಶಿವಕುಮಾರ ವೈ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲೆಮಾರಿಗಳ ಮುಂದಿನ ಪೀಳಿಗೆಯ ಸ್ವಾಭಿಮಾನ, ಗೌರವ, ಘನತೆ ಮತ್ತು ನೆಮ್ಮದಿಯ ಬದುಕಿಗಾಗಿ ಒಳಮೀಸಲಾತಿ ಬಹು ಮುಖ್ಯ ಎಂದು "ಅಲೆಮಾರಿ ಜಾತಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ (ಪರಿಶಿಷ್ಟ ಜಾತಿ 49 ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ)ಯು ಒಗ್ಗೂಡಿ ಬೆಳಗಾವಿಯ ಸುವರ್ಣಸೌಧ ಚಲೋ ಕಾರ್ಯಕ್ರಮ ಕೈಗೊಂಡಿದ್ದಾರೆ.ನಾಡಿನಲ್ಲಿ ಹೆಚ್ಚಿನ ಜನಸಂಖ್ಯೆ ಹಾಗೂ ಪ್ರಬಲ ಅಲೆಮಾರಿ ಸಮುದಾಯಗಳಾದ ಕೊರಮ ಮತ್ತು ಕೊರಚ ಸಮುದಾಯಗಳನ್ನು ಹಾಲಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಬೇರಿ್ಡಸಿ, 49 ಸೂಕ್ಷ್ಮ ಮತ್ತು 63 ಸೂಕ್ಷ್ಮ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಒದಗಿಸಲು ಮನವಿ ಮಾಡಲು ಈ ಸುವರ್ಣ ಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳಿಗೆ ಅಲೆಮಾರಿ ಆಯೋಗವನ್ನು ಶೀಘ್ರವಾಗಿ ಸ್ಥಾಪಿಸುವುದು, ರಾಜ್ಯದ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಅಲೆಮಾರಿ ಬುಡಕಟ್ಟು ಅಧ್ಯಯನ ಕೇಂದ್ರ ತೆರೆಯುವುದು, ಹಿಂದಿನ ಸರ್ಕಾರ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಲೆಮಾರಿಗಳ ಮನೆ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ಅನುದಾನ ನೀಡಿ ನಂತರ ವಾಪಸ್ ಪಡೆದ 300 ಕೋಟಿ ರೂ. ಹಣವನ್ನು ಪುನಃ ತಕ್ಷಣ ಬಿಡುಗಡೆ ಮಾಡುವುದು, ವಿಧಾನ ಪರಿಷತ್ತಿಗೆ ನಡೆಯುವ ಆಯ್ಕೆಗಳಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಅಲೆಮಾರಿ ಸಮುದಾಯದಿಂದ ಒಬ್ಬ ವ್ಯಕ್ತಿಯನ್ನು ಸದಸ್ಯರಾಗಿ ಆಯ್ಕೆ ಮಾಡುವುದನ್ನು ಕಡ್ಡಾಯಗೊಳಿಸುವುದು ಸೇರಿ ಹಲವು ಬೇಡಿಕೆಗಳಿಗೆ ಒತ್ತಾಯಿಸಲಾಗುತ್ತದೆ.
ಸರ್ವೋಚ್ಚ ನ್ಯಾಯಾಲಯವು ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ನೀಡಿದ್ದು, ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಹಿಂದುಳಿದಿರುವ ಸಮುದಾಯಗಳಿಗೆ ಮೊದಲ ಆದ್ಯತೆ ಕಲ್ಪಿಸುವಂತೆ ತೀರ್ಿನಲ್ಲಿ ಆದೇಶವಾಗಿದೆ. ಇದರ ಅನ್ವಯ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬರುವ 49 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಅತ್ಯಂತ ಹಿಂದುಳಿದಿರುವುದನ್ನು ಪರಿಗಣಿಸಿ ಮೀಸಲಾತಿ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ನೀಡಲು ಸಾವಿರಾರು ಸಂಖ್ಯೆಗೂ ಅಧಿಕ ಅಲೆಮಾರಿಗಳು ಅವರ ಸಾಂಸ್ಕೃತಿಕ ವೇಷ ಭೂಷಣಗಳೊಂದಿಗೆ ಬೆಳಗಾವಿಯ ಸುವರ್ಣ ಸೌಧ ಚಲೋ ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯ ಸುವರ್ಣ ಸೌಧದ ಎದುರು ಸಮುದಾಯಗಳ ಸಾವಿರಾರು ಬಂಧುಗಳು ಒಂದೆಡೆ ಸೇರಿ ಸರ್ಕಾರದ ಮೇಲೆ ಒತ್ತಡ ತರಲು ಧ್ವನಿಗೂಡಿಸಲು ಪರಿಶಿಷ್ಟ ಜಾತಿ 49 ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಕರೆ ನೀಡಿದ್ದು, ಬಳ್ಳಾರಿ ಜಿಲ್ಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ತೆರಳುವದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅನಂದ ಕುಮಾರ್ ಕುಡತಿನಿಪ್ರಜಾ ಪರಿವರ್ತನಾ ವೇದಿಕೆ ಜಿಲ್ಲಾಧ್ಯಕ್ಷರು ಸುಬ್ಬಣ್ಣ ಸಿಳ್ಳೆಕ್ಯಾತಸ್ ಜಿಲ್ಲಾಧ್ಯಕ್ಷರು, ಎಸ್ ಎಮ್ ಮಹೇಶ್ ತಾಲೂಕು ಅಧ್ಯಕ್ಷರು ಕಂಡಪ್ಪ ಕಟ್ಟೀಮನಿ, ಕಲ್ಯಾಣಂ ಶಂಕರ್, ಅಜ್ಜಪ್ಪ ಕಟ್ಟಿಮನಿ, ರಾಮಾಂಜಿನಿ ಸುಡುಗಾಡುಸಿದ್ದ, ದುರ್ಗೇಶ್ ,ಮಾರೇಶ, ರಾಜು ಅಶ್ವ ಇನ್ನಿತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 