ಕ್ರಿಯಾಶೀಲರಾಗಿದ್ದರೆ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯ: ಪ್ರೋ ಖಡಬಡಿ
ಬೆಳಗಾವಿ08: ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಒಬ್ಬ ಮನುಷ್ಯ ಆರೋಗ್ಯವಾಗಿದ್ದರೆ ಇಡೀ ಕುಟುಂಬ ಆರೋಗ್ಯವಾಗಿರುತ್ತದೆ. ಇದರಿಂದ ಆರೋಗ್ಯಕರ ಸಮಾಜ ರೂಪುಗೊಳ್ಳುತ್ತದೆ ಹಾಗೂ ದೇಶದ ಪ್ರಗತಿ ಹೆಚ್ಚುತ್ತದೆ ಎಂದು ಪ್ರೋಪೇಸರ್ ಜಿ.ಕೆ.ಖಡಬಡಿ ವಿಶ್ವ ಆರೋಗ್ಯ ದಿನಾಚರಣೆ ನಿಮಿತ್ಯ ಆಯೋಜಿಸಿದ್ದ ಸಮಾರಂಭದಲ್ಲಿ ಹೇಳಿದರು.
ಇಂದು ಬೆಳಗಾವಿ ನಗರದ ಮಹಿಳಾ ಬಿಎಡ್ ಕಾಲೇಜಿನಲ್ಲಿ ಫ್ಯಾಮಿಲಿ ಪ್ಲಾನ್ನಿಂಗ್ ಅಸೋಸಿಯೇಷನ್ ಆಫ ಇಂಡಿಯಾ ಬೆಳಗಾವಿ ವಿಭಾಗದ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಸಮಾರಂಭ ಆಯೋಜಿಸಲಾಗಿತ್ತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಪ್ರೋ.ಜಿ.ಕೆ ಖಡಬಡಿ,ಫ್ಯಾಮಿಲಿ ಪ್ಲಾನ್ನಿಂಗ್ ಅಸೋಸಿಯೇಷನ್ ಆಫ ಇಂಡಿಯಾ ಬೆಳಗಾವಿ ವಿಭಾಗದ ಅಧ್ಯಕ್ಷೆ ಜಯಶ್ರೀ ಕೆಂಗೇರಿ ಆಗಮಿಸಿದ್ದರು. ಸಮಾರಂಭ ಉದ್ಘಾಟಿಸಿದರು. ನಂತರ ಮಾತನಾಡಿದ ಪ್ರೋ.ಜಿ ಕೆ ಖಡಬಡಿ ಅವರು ಆಧುನಿಕ ಜೀವನ ಶೈಲಿಯಲ್ಲಿ ಆರೋಗ್ಯ ಸಮಸ್ಯೆ ಪ್ರತಿಯೊಬ್ಬರು ಎದುರಿಸಬೇಕಾಗಿದೆ.ಇದರಿಂದ ಜೀವಕ್ಕೆ ಮಾರಕ ಆಗಿರುವ ರೋಗಗಳಿಗೆ ಬಹಳ ಜನರು ಬಲಿ ಆಗುತ್ತಿದ್ದಾರೆ.ಆರೋಗ್ಯ ಸರಿಯಾಗಿದ್ದರೆ ಜೀವನ ಸುಂದರವಾಗಿರುತ್ತದೆ. ಪ್ರತಿನಿತ್ಯ ಎಲ್ಲರೂ ಚಟುವಟಿಕೆಯಿಂದ ಇದ್ದರೆ ಮಾತ್ರ ಆರೋಗ್ಯವಂತರಾಗಬಹುದು ಎಂದರು.
ಈ ಸಂದರ್ಭದಲ್ಲಿ ಬಿಎಡ್ ಕಾಲೇಜಿನ ಪ್ರಚಾರ್ಯರು ಶಿಕ್ಷಕರು ಸೇರಿದಂತೆ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 