ರಕ್ತಭಂಡಾರ, ಔಷಧಾಲಯ, ಹೋಮ್ ನಸರ್ಿಂಗ್ ಸೇವೆ ಉದ್ಘಾಟನೆ ಉದ್ಘಾಟನೆ ನೆರವೇರಿಸಿದ ಶಾಸಕ ಅಭಯ ಪಾಟೀಲ
ಬೆಳಗಾವಿ, 1: ಸ್ಮಾಟರ್್ ಸಿಟಿಯಾಗಿ ಅಭಿವೃದ್ಧಿ ಹೊಂದುತ್ತಿರುವ ಬೆಳಗಾವಿ ನಗರದ ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ ಕೆಎಲ್ಇ ಸಂಸ್ಥೆಯ ಕೊಡುಗೆ ಅಪಾರ ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹೇಳಿದರು.
ಅವರು ಇಂದು ನಗರದ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ನಡೆದ ವೈದ್ಯರ ದಿನಾಚರಣೆ, ರಕ್ತಭಂಡಾರ, ಔಷಧಾಲಯ, ಹೋಮ್ ನಸರ್ಿಂಗ್ ಸೇವೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ನಗರಗಳು ಬೆಳೆದಂತೆ ಜನಸಂಖ್ಯೆಯು ಅಧಿಕವಾಗುತ್ತದೆ, ಅದೇ ರೀತಿ ಅಭಿವೃದ್ದಿಯ ಕಾರ್ಯಕ್ರಮಗಳು, ಆಥರ್ಿಕ ಚಟುವಟಿಕೆಗಳು ಅಧಿಕವಾಗುತ್ತವೆ. ರೋಗಗಳ ಸಂಖ್ಯೆಯೂ ಅಧಿಕವಾಗುತ್ತದೆ. ಈ ನಿಟ್ಟಿನಲ್ಲಿ ಕನರ್ಾಟಕ ಮಾತ್ರವಲ್ಲದೇ ದೇಶವಿದೇಶಗಳಲ್ಲಿಯೂ ಹೆಸರುವಾಸಿಯಾದ ಕೆ ಎಲ್ ಇ ಸಂಸ್ಥೆಯ ಸೇವೆ ಅಪಾರವೆಂದು ನುಡಿದರು.
ಕಾರ್ಯಕ್ರಮದ ಇನ್ನೊಬ್ಬ ಅತಿಥಿ ಕೆ ಎಲ್ ಇ ಸಂಸ್ಥೆಯ ನಿದರ್ೆಶಕ ಡಾ. ವಿ ಎಸ್ ಸಾಧುನವರ ಮಾತನಾಡುತ್ತ ದಕ್ಷಿಣ ಬೆಳಗಾವಿ ಹಾಗೂ ಆಥರ್ಿಕವಾಗಿ ಹಿಂದುಳಿದ ನಾಗರಿಕರ ಆರೋಗ್ಯ ರಕ್ಷಣೆಯ ಉದ್ದೇಶದಿಂದ ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯನ್ನು ಕೆ ಎಲ್ ಇ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ ಲೋಕಾರ್ಪಣೆಗೊಳಿಸಲಾಯಿತು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿದರ್ೆಶಕ ಡಾ. ಎಸ್ ಸಿ ಧಾರವಾಡ ವಹಿಸಿದ್ದರು.
ಕೆ ಎಲ್ ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ಹಿರಿಯ ಶಸ್ತ್ರಚಿಕಿತ್ಸಜ್ಞ ಡಾ. ಅಶೋಕ ಗೋದಿ ಹಾಗೂ ಮಕ್ಕಳ ತಜ್ಞೆ ಡಾ. ವಿಜಯಲಕ್ಷ್ಮಿ ಕುಲಗೊಡರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕೆ ಎಲ್ ಇ ಹೋಮಿಯೋಪಥೀಕ ಕಾಲೇಜಿನ ಪ್ರಾಂಶುಪಾಲ ಡಾ. ಎಮ್ ಎ ಉಡಚನಕರ, ಹಿರಿಯ ವೈದ್ಯ ಡಾ. ಅಶೋಕ ಪಾಂಗಿ, ಡಾ. ಬಿ ಎಸ್ ಮಹಾಂತಶೆಟ್ಟಿ ಮತ್ತು ಕೆ ಎಲ್ ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ರಕ್ತ ಭಂಡಾರ ಅಧಿಕಾರಿ ಡಾ. ವೀರಗೆ, ಮಾಜಿ ಮೇಯರ ವಿಜಯ ಮೋರೆ, ಮಾಜಿ ನಗರಸೇವಕರಾದ ಸಂಜಯ ಸವಾಶೇರಿ, ರಮೇಶ ಸೊಂಟಕ್ಕಿ, ದೀಪಕ ಮುಚ್ಚಂಡಿ ಹಿರಿಯನಾಗರಿಕ ಸಂಘದ ಅಧ್ಯಕ್ಷ ಗುರುನಾಥ ಶಿಂಧೆ, ಮಾಜಿ ಅಧ್ಯಕ್ಷ ಪ್ರಭಾಕರ ಕುಲಕಣರ್ಿ ಭಾಗವಹಿದ್ದರು.
ಕಾರ್ಯಕ್ರಮವನ್ನು ಅರುಣ ನಾಗಣ್ಣವರ ನಿರೂಪಿಸಿದರು, ಹಿರಿಯ ವೈದ್ಯ ಡಾ. ಬಿಎಸ್ ಮಹಾಂತಶೆಟ್ಟಿ ಸ್ವಾಗತಿಸಿದರು. ಡಾ. ಕಿಶೋರ ಬಂಡಗಾರ ವಂದಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 