ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವುದೇ ನಮ್ಮ ಗುರಿ : ಎಸ್. ಬಾಬು
Our goal is to respond to public issues: S. Babu
ಬಳ್ಳಾರಿ 08: ದೇಶದಲ್ಲಿ 1500ಕ್ಕೂ ಹೆಚ್ಚು ಮಾನವ ಹಕ್ಕುಗಳ ಸಂಘಟನೆಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ದಕ್ಷಿಣ ಏಷ್ಯಾ ಮಾನವ ಹಕ್ಕುಗಳ ವೇದಿಕೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಜನಪರ ಸಂಘಟನೆಯಾಗಿದೆ ಎಂದು ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಎಸ್. ಬಾಬು ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಘಟನೆ ಭಾರತ ಸರ್ಕಾರದ ಗ್ರಾಹಕರ ವ್ಯವಹಾರಗಳ ಸಚಿವಾಲಯದಲ್ಲಿ ನೊಂದಾಯಿತವಾಗಿದ್ದು, ಸುಮಾರು 80 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ಬೃಹತ್ ಸಂಘಟನೆಯಾಗಿದೆ ಎಂದು ತಿಳಿಸಿದರು.
ಸಂಘಟನೆಯ ಮೂಲ ಉದ್ದೇಶ ಸಮಾಜದ ಬಲಹೀನ ವರ್ಗಗಳು ಹಾಗೂ ಅನ್ಯಾಯಕ್ಕೊಳಗಾದ ವ್ಯಕ್ತಿಗಳಿಗೆ ನ್ಯಾಯ ಒದಗಿಸುವುದಾಗಿದೆ. ಸಾರ್ವಜನಿಕರಿಗೆ ಆಗುವ ಅನ್ಯಾಯ, ಸಮಸ್ಯೆಗಳ ಬಗ್ಗೆ ಸ್ಪಂದಿಸಿ ಅವರ ಹಕ್ಕುಗಳನ್ನು ಕಾಪಾಡುವುದು ನಮ್ಮ ಪ್ರಮುಖ ಧ್ಯೇಯವಾಗಿದೆ ಎಂದು ಹೇಳಿದರು.ವೇದಿಕೆಯ ಹೆಸರನ್ನು ಯಾವುದೇ ಸದಸ್ಯರು ದುರುಪಯೋಗ ಮಾಡಿಕೊಂಡರೆ, ಸಂಬಂಧಪಟ್ಟವರು ದೂರು ನೀಡಿದ ಕೂಡಲೇ ಪರೀಶೀಲಿಸಿ, ತಪ್ಪಿತಸ್ಥ ಸದಸ್ಯರನ್ನು ಸಂಘಟನೆಯಿಂದ ತಕ್ಷಣವೇ ವಜಾಗೊಳಿಸಲಾಗುವುದು ಎಂದು ಎಚ್ಚರಿಸಿದರು.ಈ ಪತ್ರಿಕಾಗೋಷ್ಠಿಯಲ್ಲಿ ವಲಿಪಿರ್ ಭಾಷ್, ನಾಗಪ್ಪ ಅಮೀನಾ, ಸುಜಾತ, ಪದ್ಮಾವತಿ, ಹುಲಿಗೆಮ್ಮ, ನವೀನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 