ಯುವ ಚಿಂತನಾ ಸಮಾವೇಶ-25 ಕ್ಕೆ ಸರ್ವಾಧ್ಯಕ್ಷರಾಗಿ ಪಿ.ವಿ .ಹಿರೇಮಠ ಆಯ್ಕೆ
P.V. Hiremath elected as President of Yuva Chintana Samavesh-25
ಯುವ ಚಿಂತನಾ ಸಮಾವೇಶ-25 ಕ್ಕೆ ಸರ್ವಾಧ್ಯಕ್ಷರಾಗಿ ಪಿ.ವಿ .ಹಿರೇಮಠ ಆಯ್ಕೆ.
ದಾರವಾಡ 31 : ಸಾಮಾಜಿಕ ಜಾಲತಾಣ, ರೀಲ್ಸಗಳ ವ್ಯಾಮೋಹ ಜಾತಿ, ಧರ್ಮಗಳಂತಹ ವಿಷಯದಲ್ಲಿ ಸಿಕ್ಕಿಹಾಕಿಕೊಂಡ ಯುವ ಸಮುದಾಯ ಇವಾಗ ಎಚ್ಚೆತ್ತುಕೊಳ್ಳದಿದ್ದರೆ ದೇಶದ ಪ್ರಗತಿ ಅಸಾಧ್ಯ ಈ ನಿಟ್ಟಿನಲ್ಲಿ ಪ್ರತಿಷ್ಠಾನವು ಯುವಸಮುದಾಯಕ್ಕೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಪರಿಸರವಾದಿ, ನೇಚರ್ ಫಸ್ಟ್ ಇಕೋ ವಿಲೇಜ್ ನ ಸಂಸ್ಥಾಪಕರಾದ ಪಿ ವ್ಹಿ ಹಿರೇಮಠ ಹೇಳಿದರು.ಅವರು ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನವು ಫೆಬ್ರುವರಿ 15 ರಂದು ಹಮ್ಮಿಕೊಳ್ಳುತ್ತಿರುವ ಯುವ ಚಿಂತನಾ ಸಮಾವೇಶಕ್ಕೆ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಪರಿಸರ ತಜ್ಞ ಪಿ.ವಿ ಹಿರೇಮಠ ಅವರಿಗೆ ಆಹ್ವಾನ ನೀಡಿದ ಸಂದರ್ಶನದಲ್ಲಿ ಮಾತನಾಡಿ ಪ್ರತಿಷ್ಠಾನ ಹಮ್ಮಿಕೊಳ್ಳುವ ಎಲ್ಲ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾದ ಮತ್ತು ಯುವ ಸಮುದಾಯವನ್ನು ಜಾಗೃತಿ ಮಾಡುವ ನಿಟ್ಟಿನಲ್ಲಿ ಇರುತ್ತವೆ ಎಂದು ಹೇಳಿದರು. ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಪಿ.ವಿ ಹಿರೇಮಠ ಅವರನ್ನು ಪ್ರತಿಷ್ಠಾನದ ಪದಾಧಿಕಾರಿಗಳು ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಎಮ್ ಎಸ್ ಫರಾಸ, ಪ್ರದಾನ ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ, ಉಪಾಧ್ಯಕ್ಷ ಸುರೇಶ ಬೆಟಗೇರಿ, ಕೋಶಾಧ್ಯಕ್ಷ ಪ್ರೇಮಾನಂದ ಶಿಂಧೆ, ಇಂಜನಿಯರ್ಸ ಅಸೋಸಿಯೇಷನ್ ಅಧ್ಯಕ್ಷರಾದ ಸುನೀಲ ಬಾಗೇವಾಡಿ, ಕೃಷ್ಣಮೂರ್ತಿ ಗೊಲ್ಲರ ಇದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 