ಯುವ ಚಿಂತನಾ ಸಮಾವೇಶ-25 ಕ್ಕೆ ಸರ್ವಾಧ್ಯಕ್ಷರಾಗಿ ಪಿ.ವಿ .ಹಿರೇಮಠ ಆಯ್ಕೆ
P.V. Hiremath elected as President of Yuva Chintana Samavesh-25
ಯುವ ಚಿಂತನಾ ಸಮಾವೇಶ-25 ಕ್ಕೆ ಸರ್ವಾಧ್ಯಕ್ಷರಾಗಿ ಪಿ.ವಿ .ಹಿರೇಮಠ ಆಯ್ಕೆ.
ದಾರವಾಡ 31 : ಸಾಮಾಜಿಕ ಜಾಲತಾಣ, ರೀಲ್ಸಗಳ ವ್ಯಾಮೋಹ ಜಾತಿ, ಧರ್ಮಗಳಂತಹ ವಿಷಯದಲ್ಲಿ ಸಿಕ್ಕಿಹಾಕಿಕೊಂಡ ಯುವ ಸಮುದಾಯ ಇವಾಗ ಎಚ್ಚೆತ್ತುಕೊಳ್ಳದಿದ್ದರೆ ದೇಶದ ಪ್ರಗತಿ ಅಸಾಧ್ಯ ಈ ನಿಟ್ಟಿನಲ್ಲಿ ಪ್ರತಿಷ್ಠಾನವು ಯುವಸಮುದಾಯಕ್ಕೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಪರಿಸರವಾದಿ, ನೇಚರ್ ಫಸ್ಟ್ ಇಕೋ ವಿಲೇಜ್ ನ ಸಂಸ್ಥಾಪಕರಾದ ಪಿ ವ್ಹಿ ಹಿರೇಮಠ ಹೇಳಿದರು.ಅವರು ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನವು ಫೆಬ್ರುವರಿ 15 ರಂದು ಹಮ್ಮಿಕೊಳ್ಳುತ್ತಿರುವ ಯುವ ಚಿಂತನಾ ಸಮಾವೇಶಕ್ಕೆ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಪರಿಸರ ತಜ್ಞ ಪಿ.ವಿ ಹಿರೇಮಠ ಅವರಿಗೆ ಆಹ್ವಾನ ನೀಡಿದ ಸಂದರ್ಶನದಲ್ಲಿ ಮಾತನಾಡಿ ಪ್ರತಿಷ್ಠಾನ ಹಮ್ಮಿಕೊಳ್ಳುವ ಎಲ್ಲ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾದ ಮತ್ತು ಯುವ ಸಮುದಾಯವನ್ನು ಜಾಗೃತಿ ಮಾಡುವ ನಿಟ್ಟಿನಲ್ಲಿ ಇರುತ್ತವೆ ಎಂದು ಹೇಳಿದರು. ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಪಿ.ವಿ ಹಿರೇಮಠ ಅವರನ್ನು ಪ್ರತಿಷ್ಠಾನದ ಪದಾಧಿಕಾರಿಗಳು ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಎಮ್ ಎಸ್ ಫರಾಸ, ಪ್ರದಾನ ಕಾರ್ಯದರ್ಶಿ ಮಾರ್ತಾಂಡಪ್ಪ ಕತ್ತಿ, ಉಪಾಧ್ಯಕ್ಷ ಸುರೇಶ ಬೆಟಗೇರಿ, ಕೋಶಾಧ್ಯಕ್ಷ ಪ್ರೇಮಾನಂದ ಶಿಂಧೆ, ಇಂಜನಿಯರ್ಸ ಅಸೋಸಿಯೇಷನ್ ಅಧ್ಯಕ್ಷರಾದ ಸುನೀಲ ಬಾಗೇವಾಡಿ, ಕೃಷ್ಣಮೂರ್ತಿ ಗೊಲ್ಲರ ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 