ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸಂಜೀವಿನಿ ಒಕ್ಕೂಟದ ಪಾತ್ರ ಮಹತ್ವ ಪಿಡಿಒ ಅಪರಂಜಿ
PDO Aparanji stresses importance of Sanjeevini Coalition's role in empowering women economically
ಕಂಪ್ಲಿ 31: ಸರ್ಕಾರದ ರಚಿಸಿರುವ ಸಂಜೀವಿನಿ ಒಕ್ಕೂಟಗಳು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಲ್ಲಿ ಯಶಸ್ವಿಯಾಗಿವೆ’ ಎಂದು ಪಿಡಿಒ ಕೆ.ಅಪರಂಜಿ ಹೇಳಿದರು. ತಾಲ್ಲೂಕಿನ ನೆಲ್ಲುಡಿ ಗ್ರಾಪಂ ಅಟವರಣದಲ್ಲಿ ಹೊಸ ನೆಲ್ಲುಡಿ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ನೇತೃತ್ವದಲ್ಲಿ ಗ್ರಾಪಂ ಸಹಯೋಗದಲ್ಲಿ ಬುಧವಾರ ಏರಿ್ಡಸಿದ್ದ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿ, ಮಹಿಳೆಯರಲ್ಲಿ ಕೌಶಲ ಅಭಿವೃದ್ಧಿಗೊಳಿಸಿ ಅವರನ್ನು ಆರ್ಥಿಕವಾಗಿ ಪ್ರಗತೀಶೀಲರನ್ನಾಗಿಸುವ ಸಲುವಾಗಿ ಸಂಜೀವಿನಿ ಒಕ್ಕೂಟಗಳನ್ನು ರಚಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟಗಳಿದ್ದು, ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಹಾಗೂ ಆರ್ಥಿಕವಾಗಿ ಸಬಲರಾಗಲು ಸಂಜೀವಿನಿ ಒಕ್ಕೂಟದ ಪಾತ್ರ ಮಹತ್ವದ್ದಾಗಿದೆ.
ಈ ಒಕ್ಕೂಟದಿಂದ ಸಾಕಷ್ಟು ಮಹಿಳೆಯರು ತಮ್ಮ ಭವಿಷ್ಯವನ್ನು ಆರ್ಥಿಕವಾಗಿ ವೃದ್ಧಿಸಿಕೊಂಡಿದ್ದಾರೆ ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಮ್ಮಿಗನೂರು ವಲಯ ಮೇಲ್ವಿಚಾರಕಿ ಎರೆ್ರಮ್ಮ ಮಾತನಾಡಿ, ‘ಮಹಿಳೆಯರು ಆರ್ಥಿಕವಾಗಿ ಪ್ರಗತಿ ಸಾಧಿಸಿದರೆ ಇಡೀ ಕುಟುಂಬವೇ ಪ್ರಗತಿ ಸಾಧಿಸುತ್ತದೆ. ಮಹಿಳೆಯರು ಸಂಘಗಳ ಮೂಲಕ ಬಿಡುವಿನ ಸಮಯವನ್ನು ಆರ್ಥಿಕತೆಗೆ ಬಳಸಿಕೊಳ್ಳಿ ಎಂದರು.ತಾಲೂಕು ಮಹಿಳಾ ಒಕ್ಕೂಟದ ಸಂಯೋಜಕಿ ಪಾರ್ವತಿ ಮಾತನಾಡಿ, ಸ್ತ್ರೀಶಕ್ತಿ ಯೋಜನೆ 2000-01ರ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಾರಿಗೊಂಡಿದ್ದು, ಸ್ವ-ಸಹಾಯ ಗುಂಪುಗಳ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣ ಇದರ ಮುಖ್ಯ ಉದ್ದೇಶವಾಗಿದೆ, ಬ್ಯಾಂಕ್ನಿಂದ ಸಾಲ ತೆಗೆದು ಕೊಂಡು ಆರ್ಥಿಕವಾಗಿ ಸಬಲರಾಗಲು ಈ ಯೋಜನೆ ಅನುಕೂಲವಾಗಿದೆ.
ಗ್ರಾಪಂ ಮಟ್ಟದಲ್ಲಿ ವಾರ್ಷಿಕ ಸಾಮಾನ್ಯ ಸಭೆ ಮಾಡಿ, ಮಹಿಳೆಯರ ಸ್ವಾವಲಂಬನೆಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಜಯಮ್ಮ, ಸದಸ್ಯೆ ಶಾಂತಿ, ಕಾರ್ಯದರ್ಶಿ ಕೆ.ಮನೋಜ್, ಬಿಲ್ ಕಲೆಕ್ಟರ್ ಡಿ.ರಾಜಾಸಾಬ್, ಡಾಟಾ ಆಪರೇಟರ್ ಪೀರಾಸಾಬ್, ಹೊಸ ನೆಲ್ಲುಡಿ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ಅಧ್ಯಕ್ಷ ಸರೋಜಮ್ಮ, ಕಾರ್ಯದರ್ಶಿ ಗಂಗಮ್ಮ, ಖಜಾಂಚಿ ಲಕ್ಷ್ಮೀ, ಮಹತ್ವಕಾಂಕ್ಷಿ ಯೋಜನೆಯ ತಾಲೂಕು ಸಂಯೋಜಕ ಬಸವನಗೌಡ, ಸಂಪನ್ಮೂಲ ವ್ಯಕ್ತಿ ಶ್ರೀಗೌರಿ, ಎಲ್ಸಿಆರ್ಪಿ ಮಾಲಾ, ಎನ್ಬಿಕೆ ತ್ರಿವೇಣಿ, ಪಶುಸಕಿ ಬಿ.ಮಾನಸ, ಕೃಷಿಸಕಿ ಚಂದ್ರಕಲಾ ಸೇರಿದಂತೆ ಮಹಿಳೆಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 