16ರಂದು ಪಿಡಿಓ, ಅಂಗನವಾಡಿ ಮೇಲ್ವಿಚಾರಕರಿಗೆ ಕಾಯರ್ಾಗಾರ: ತೊರವಿ
ಕೊಪ್ಪಳ 06: ಬಾಲ್ಯ ವಿವಾಹ ಹಾಗೂ ಬಾಲ ಕಾಮರ್ಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಕುರಿತು ಎಲ್ಲಾ ಗ್ರಾ.ಪಂ. ಪಿಡಿಓ, ಅಂಗನವಾಡಿ ಮೇಲ್ವಿಚಾರಕಿಯರಿಗೆ ಮತ್ತು ಸಮೂಹ ಸಂಪನ್ಮೂಲ ಅಧಿಕಾರಿಗಳಿಗೆ ಒಂದು ದಿನದ ಕಾಯರ್ಾಗಾರವನ್ನು ಜ. 16 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಆಯೋಜಿಸಲಾಗಿದೆ ಎಂದು ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ತೊರವಿ ಅವರು ಹೇಳಿದರು.
ಬಾಲ್ಯ ವಿವಾಹ ಹಾಗೂ ಬಾಲ ಕಾಮರ್ಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಬಗ್ಗೆ ಗ್ರಾ.ಪಂ. ಪಿಡಿಓ, ಅಂಗನವಾಡಿ ಮೇಲ್ವಿಚಾರಕಿಯರಿಗೆ ಮತ್ತು ಸಮೂಹ ಸಂಪನ್ಮೂಲ ಅಧಿಕಾರಿಗಳಿಗೆ ಒಂದು ದಿನದ ಕಾಯರ್ಾಗಾರವನ್ನು ಆಯೋಜಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಛೇರಿಯಲ್ಲಿ ಶನಿವಾರದಂದು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ 8, 9 ಹಾಗೂ 10ನೇ ತರಗತಿಯ ಮತ್ತು ಪ್ರಥಮ ಪಿಯುಸಿ ವಿದ್ಯಾಥರ್ಿಗಳಿಗೆ ಜ. 16 ರಿಂದ 30 ರವರೆಗೆ "ಸಂದಿಗ್ಧ" ಚಲನಚಿತ್ರ ಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಗ್ರಾ.ಪಂ. ಪಿಡಿಓ, ಅಂಗನವಾಡಿ ಮೇಲ್ವಿಚಾರಕಿಯರಿಗೆ ಮತ್ತು ಸಮೂಹ ಸಂಪನ್ಮೂಲ ಅಧಿಕಾರಿಗಳಿಗೆ ಒಂದು ದಿನದ ಕಾಯರ್ಾಗಾರವನ್ನು ಸಹ ಹಮ್ಮಿಕೊಳ್ಳಲಾಗಿದೆ.
ಅಲ್ಲದೇ ಜ. 17 ರಂದು ಬೆಳಿಗ್ಗೆ 09 ಗಂಟೆಗೆ ಕೊಪ್ಪಳ ನಗರದಲ್ಲಿ ಬೃಹತ್ ಜಾಗೃತಿ ಜಾಥಾ ಮತ್ತು ಬೆಳಿಗ್ಗೆ 11 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜಾಗೃತಿ ಜಾಥಾ ಮತ್ತು ಕಾರ್ಯಕ್ರಮವು ಬಾಲ್ಯ ವಿವಾಹ, ಬಾಲ ಕಾಮರ್ಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಸ್ವಚ್ಛ ಭಾರತ, ಸಕರ್ಾರಿ ಶಾಲೆಗಳ ಉನ್ನತೀಕರಣ ಹಾಗೂ ಶಾಲೆಯಿಂದ ದೂರ ಉಳಿದ ಮಕ್ಕಳಿಗೆ ಮರಳಿ ಶಾಲೆಗೆ ತರುವ ಕುರಿತು ಅರಿವು ಮೂಡಿಸಲಾಗುವುದು. ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಗವಿಮಠದ ಸ್ವಾಮೀಜಿ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಓ ವೆಂಕಟ್ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಸೇರಿದಂತೆ, ಕನರ್ಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು, ಚಲನಚಿತ್ರ ನಟ, ನಟಿಯರು ಮತ್ತು ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಾಥಾ ಮತ್ತು ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಇಲಾಖೆ ಅಧಿಕಾರಿಗಳು ಆಗಮಿಸಿ ಈ ಆಂಧೋಲನವನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ತೊರವಿ ಅವರು ಮನವಿ ಮಾಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕ ಈರಣ್ಣ ಪಂಚಾಳ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಕೃಷ್ಣಮೂತರ್ಿ ದೇಸಾಯಿ, ಯುನೆಸ್ಸೆಫ್ ಜಿಲ್ಲಾ ಮಕ್ಕಳ ರಕ್ಷಣ ಯೋಜನೆಯ ಹರೀಶ್ ಜೋಗಿ, ವಾತರ್ಾ ಇಲಾಖೆಯ ಎಂ. ಅವಿನಾಶ ಸೇರಿಂದತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 