ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ ಸಮಾರೋಪ
Panchakalyana Pratistha Mahotsava concludes
ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ ಸಮಾರೋಪ
ಯಮಕನಮರಡಿ 10: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಲ್ಲಿ ಆಧ್ಯಾತ್ಮಿಕ ಪೂಜಾ ಸಮಾರಂಭಗಳು ಮೂಡಿದಲ್ಲಿ ಮಾತ್ರ ಆಧ್ಯಾತ್ಮಿಕ ಉಳಿಯಲು ಸಾಧ್ಯ. ಇಂತಹ ಪುಣ್ಯಮಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನನಗೆ ಅವಕಾಶ ಸಿಕ್ಕಿದ್ದು ಸಂತೋಷವನ್ನುಂಟು ಮಾಡಿದೆ. ಇಲ್ಲಿ ಕೂಡಿದ್ದ ಎಲ್ಲ ಹೆಣ್ಣುಮಕ್ಕಳು ಶೃಂಗಾರದೊಂದಿಗೆ ಭಗವಾನ ಪಾರ್ಶ್ವನಾಥರ ಸ್ಮರಣೆಯಲ್ಲಿ ಪಾಲ್ಗೋಂಡು ಪುನೀತರಾಗಿದ್ದಾರೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.ಅವರು ಹುಕ್ಕೇರಿ ತಾಲೂಕಿನ ಉ ಖಾನಾಪುರ ದಿ.3ರಿಂದ 9ರವರೆಗೆ ಜರುಗಿದ ಪ್ರತಿಷ್ಠಾನ ಮಹೋತ್ಸವ ಸಮಾರಂಭದ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭಕೋರುವುದರೊಂದಿಗೆ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದಿವ್ಯ ಸಾನಿದ್ಯ ವಹಿಸಿದ್ದ ವಾತ್ಸಲ್ಯ ವಾರಿಧಿ ಧರ್ಮಕೇಸರಿ ಆಚಾರ್ಯ ಜಿನಸೇನ ಮುನಿ ಮಹಾರಾಜರ ಆಶೀರ್ವಾದವು ನಮಗೂ ಇರಲೆಂದು ಬೇಡಿಕೊಂಡರು. ಉತ್ಸವ ಕಮೀಟಿ ಅಧ್ಯಕ್ಷರು ಉಪಾಧ್ಯಕ್ಷರು, ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಹೆಲಿಕಾಪ್ಟರ ಮೂಲಕ ಪುಷ್ಪವೃಷ್ಠಿ ಮಾಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 