ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ ಸಮಾರೋಪ
Panchakalyana Pratistha Mahotsava concludes
ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ ಸಮಾರೋಪ
ಯಮಕನಮರಡಿ 10: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಲ್ಲಿ ಆಧ್ಯಾತ್ಮಿಕ ಪೂಜಾ ಸಮಾರಂಭಗಳು ಮೂಡಿದಲ್ಲಿ ಮಾತ್ರ ಆಧ್ಯಾತ್ಮಿಕ ಉಳಿಯಲು ಸಾಧ್ಯ. ಇಂತಹ ಪುಣ್ಯಮಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನನಗೆ ಅವಕಾಶ ಸಿಕ್ಕಿದ್ದು ಸಂತೋಷವನ್ನುಂಟು ಮಾಡಿದೆ. ಇಲ್ಲಿ ಕೂಡಿದ್ದ ಎಲ್ಲ ಹೆಣ್ಣುಮಕ್ಕಳು ಶೃಂಗಾರದೊಂದಿಗೆ ಭಗವಾನ ಪಾರ್ಶ್ವನಾಥರ ಸ್ಮರಣೆಯಲ್ಲಿ ಪಾಲ್ಗೋಂಡು ಪುನೀತರಾಗಿದ್ದಾರೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.ಅವರು ಹುಕ್ಕೇರಿ ತಾಲೂಕಿನ ಉ ಖಾನಾಪುರ ದಿ.3ರಿಂದ 9ರವರೆಗೆ ಜರುಗಿದ ಪ್ರತಿಷ್ಠಾನ ಮಹೋತ್ಸವ ಸಮಾರಂಭದ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭಕೋರುವುದರೊಂದಿಗೆ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದಿವ್ಯ ಸಾನಿದ್ಯ ವಹಿಸಿದ್ದ ವಾತ್ಸಲ್ಯ ವಾರಿಧಿ ಧರ್ಮಕೇಸರಿ ಆಚಾರ್ಯ ಜಿನಸೇನ ಮುನಿ ಮಹಾರಾಜರ ಆಶೀರ್ವಾದವು ನಮಗೂ ಇರಲೆಂದು ಬೇಡಿಕೊಂಡರು. ಉತ್ಸವ ಕಮೀಟಿ ಅಧ್ಯಕ್ಷರು ಉಪಾಧ್ಯಕ್ಷರು, ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು. ಹೆಲಿಕಾಪ್ಟರ ಮೂಲಕ ಪುಷ್ಪವೃಷ್ಠಿ ಮಾಡಲಾಯಿತು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 