'ಪಾಲಕರು ಮಕ್ಕಳಿಗೆ ಮಿತ್ರರಂತೆ ಬೆರೆತು ಅಭ್ಯಾಸ ಮಾಡಲು ಸಲಹೆ ನೀಡಬೇಕು'
ಲೋಕದರ್ಶನ ವರದಿ
ಬೆಳಗಾವಿ 31: ನಗರದ ಗೋವಾವೇಸದಲ್ಲಿರುವ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಟ್ಯಾಗೋರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ದಿ. 28ರಂದು ನಡೆದ ಪಾಲಕರ ಸಮಾವೇಶದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಪಾಲಕರನ್ನು ಉದ್ದೇಶೀಸಿ ಮಾತನಾಡಿದ ಪ್ರಾಚಾರ್ಯ ಡಾ. ಸಿ.ಎನ್.ನಾಯ್ಕರ ಅವರು ಮಹಾವಿದ್ಯಾಲಯದ ವಿದ್ಯಾಥರ್ಿಗಳಿಗೆ ಅತ್ಯುತ್ತಮವಾಗಿ ಶೈಕ್ಷಣಿಕ ವಾತಾವರಣ ನಿಮರ್ಾಣ ಮಾಡುವ ಧೇಯ್ಯೋದ್ದೇಶ ಹೊಂದಿದೆ. ಪಾಲಕರು ಮಿತ್ರರಂತೆ ಮೃದುವಾಗಿ ಬೆರೆತು ಮಕ್ಕಳಿಗೆ ಅಭ್ಯಾಸ ಮಾಡಲು ಸಲಹೆ ನೀಡಬೇಕು. ಪಾಲಕರು ಮಕ್ಕಳಿಗೆ ಅವಶ್ಯವಿರುವ ಮೂಲ ಸೌಕರ್ಯಗಳನ್ನು ಮಾತ್ರ ನೀಡಬೇಕು, ಮಹಾವಿದ್ಯಾಲಯದಲ್ಲಿ ಅಭ್ಯಾಸದ ಜೊತೆಗೆ ಮಕ್ಕಳ ಅಭಿರುಚಿಗೆತಕ್ಕಂತೆ ಕ್ರೀಡೆ, ಸಾಂಸ್ಕೃತಿಕ ಸ್ರ್ಪಗಳಿಗೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಶಿಕ್ಷಕ, ಪಾಲಕ, ವಿದ್ಯಾಥರ್ಿಗಳು ಮೂವರು ಸೇರಿ ಅಹನರ್ಿಸಿ ಶ್ರಮಿಸಿದಾಗ ಮಾತ್ರ ಅತ್ಯುತ್ತಮ ಫಲಿತಾಂಶ ಹೊರಬರುತ್ತದೆ ಎಂದು ನುಡಿದರು.
ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶ್ವೇತಾ ಸಿ. ನಾಯ್ಕರ ಅವರು ವೇದಿಕೆಮೇಲೆ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಸುಚಿತ್ರಾ ಯಾದವ ಸ್ವಾಗತಿಸಿದರು, ದೀಪಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾಥರ್ಿ ವೃಂದದವರು ಉಪಸ್ಥಿತರಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 