'ಪಾಲಕರು ಮಕ್ಕಳಿಗೆ ಮಿತ್ರರಂತೆ ಬೆರೆತು ಅಭ್ಯಾಸ ಮಾಡಲು ಸಲಹೆ ನೀಡಬೇಕು'
ಲೋಕದರ್ಶನ ವರದಿ
ಬೆಳಗಾವಿ 31: ನಗರದ ಗೋವಾವೇಸದಲ್ಲಿರುವ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಟ್ಯಾಗೋರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ದಿ. 28ರಂದು ನಡೆದ ಪಾಲಕರ ಸಮಾವೇಶದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಪಾಲಕರನ್ನು ಉದ್ದೇಶೀಸಿ ಮಾತನಾಡಿದ ಪ್ರಾಚಾರ್ಯ ಡಾ. ಸಿ.ಎನ್.ನಾಯ್ಕರ ಅವರು ಮಹಾವಿದ್ಯಾಲಯದ ವಿದ್ಯಾಥರ್ಿಗಳಿಗೆ ಅತ್ಯುತ್ತಮವಾಗಿ ಶೈಕ್ಷಣಿಕ ವಾತಾವರಣ ನಿಮರ್ಾಣ ಮಾಡುವ ಧೇಯ್ಯೋದ್ದೇಶ ಹೊಂದಿದೆ. ಪಾಲಕರು ಮಿತ್ರರಂತೆ ಮೃದುವಾಗಿ ಬೆರೆತು ಮಕ್ಕಳಿಗೆ ಅಭ್ಯಾಸ ಮಾಡಲು ಸಲಹೆ ನೀಡಬೇಕು. ಪಾಲಕರು ಮಕ್ಕಳಿಗೆ ಅವಶ್ಯವಿರುವ ಮೂಲ ಸೌಕರ್ಯಗಳನ್ನು ಮಾತ್ರ ನೀಡಬೇಕು, ಮಹಾವಿದ್ಯಾಲಯದಲ್ಲಿ ಅಭ್ಯಾಸದ ಜೊತೆಗೆ ಮಕ್ಕಳ ಅಭಿರುಚಿಗೆತಕ್ಕಂತೆ ಕ್ರೀಡೆ, ಸಾಂಸ್ಕೃತಿಕ ಸ್ರ್ಪಗಳಿಗೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಶಿಕ್ಷಕ, ಪಾಲಕ, ವಿದ್ಯಾಥರ್ಿಗಳು ಮೂವರು ಸೇರಿ ಅಹನರ್ಿಸಿ ಶ್ರಮಿಸಿದಾಗ ಮಾತ್ರ ಅತ್ಯುತ್ತಮ ಫಲಿತಾಂಶ ಹೊರಬರುತ್ತದೆ ಎಂದು ನುಡಿದರು.
ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶ್ವೇತಾ ಸಿ. ನಾಯ್ಕರ ಅವರು ವೇದಿಕೆಮೇಲೆ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಸುಚಿತ್ರಾ ಯಾದವ ಸ್ವಾಗತಿಸಿದರು, ದೀಪಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾಥರ್ಿ ವೃಂದದವರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 