ಪಾಲಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ದುದಗಿ
Parents should emphasize on children's education: Dudagi
ಪಾಲಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ದುದಗಿ
ಜಮಖಂಡಿ 06: ಮಕ್ಕಳ ಶಿಕ್ಷಣಕ್ಕೆ ಶಾಲಾ ಶಿಕ್ಷಕರಷ್ಟೆ ಅಲ್ಲ ಪಾಲಕರದ್ದು ಜವಾಬ್ದಾರಿಯಾಗಿದೆೆ. ಪಾಲಕರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಮುಖ್ಯಶಿಕ್ಷಕಿ ಪಿ.ಎಚ್.ದುದಗಿ ಹೇಳಿದರು. ನಗರದ ಸರಕಾರಿ ಹಿರಿಯ ಪ್ರಾಥಮಿಕ ಮಹಾಂತೇಶನಗರ ಶಾಲೆಯಲ್ಲಿ 2025-26ನೇ ಸಾಲಿನ ಪ್ರೋತ್ಸಾಹದಾಯಕ ಯೋಜನೆಅಡಿಯಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಲೆಗೆ ಮಕ್ಕಳು ದೈನಂದಿನ ಶಾಲಾ ತರಗತಿಗಳಲ್ಲಿ ಭಾಗವಹಿಸುವದರಿಂದ ಅವರಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಳವಾಗುತ್ತದೆ, ಅದಕ್ಕೆ ಪಾಲಕರು ತಮ್ಮ ಮಕ್ಕಳ ಭವಿಷ್ಯ ಶೈಕ್ಷಣಿಕವಾಗಿ ಸುಧಾರಿಸಿಕೊಳ್ಳುವ ಕಟ್ಟು ನಿಟ್ಟು ಹಾಕಿಕೊಳ್ಳಬೇಕು. ಪ್ರತಿ ವರ್ಷ ಸರಕಾರ ಮಕ್ಕಳಿಗಾಗಿ ಉಚಿತ ಸಮವಸ್ತ್ರ ವಿತರಿಸುತ್ತಿದ್ದು ಅದನ್ನು ಪಡೆದು ಮಕ್ಕಳು ಶಿಕ್ಷಣ ಜೊತೆಗೆ ಶಿಸ್ತು ಕಾಪಾಡಿಕೊಳ್ಳಬೇಕು ಎಂದರು. ಸರಕಾರಿ ಪ್ರೌಢಶಾಲೆಯ ನಿವೃತ್ ಮುಖ್ಯ ಶಿಕ್ಷಕ ಸಿ.ಎಸ್ ಪಾಟೀಲ ಹಾಗೂ ಕಾನಿಪ ಅಧ್ಯಕ್ಷ ಲಕ್ಷ್ಮೀಕಾಂತ ದುದಗಿ, ವಿಜಯಲಕ್ಷ್ಮೀ ದುದಗಿ ಅವರನ್ನು ಸನ್ಮಾನಿಸಿದರು. ವೇದಿಕೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷೆ ಮಹಾದೇವಿ ತೆಳಗಡೆ, ಜಿಲಾನಿ ಶೇಖ್, ಹಣಮಂತ ಶಿವನಕ್ಕನವರ, ಎಸ್.ಎಸ್.ಹುಡೇದ, ಆರ್.ಜಿ ಪಂಚಾಳ, ಎಮ್,ಎಸ್,ಹಲಗಲಿ, ಐ.ಜಿ. ಮಾಗಿ, ಕೆ.ಜಿ. ಭಸ್ಮೆ, ಆರ್.ವ್ಹಿ. ಇಂಗಳಗಿ, ರೋಹಿಣಿ ಮಾಳಿ, ದೀಪಾ ಗಾಯಕವಾಡ ಇತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 