ಅರೆಕಾಲಿಕ ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ
Part-time volunteer training workshop
ಹಾವೇರಿ 07 : ನಿಸ್ವಾರ್ಥ ಮನೋಭಾವದಿಂದ ಸಮಾಜ ಸೇವೆ ಮಾಡಬೇಕು, ಅಂದಾಗ ಮಾತ್ರ ಸಮಾಜದಲ್ಲಿನ ಜನರು ಕಾನೂನು ಅರಿವು ಹೊಂದಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಾ್ಪ ಎನ್. ಅವರು ಹೇಳಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಬುಧವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಓಟ್ಲಾಡ್ ಇಂಡಿಯಾ ಪೌಂಡೇಷನ್ ಸಹಯೋಗದಲ್ಲಿ ಅರೆಕಾಲಿಕ ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಮನೆ ಹಾಗೂ ಮನ ಮನಕ್ಕೂ ಕಾನೂನಿನ ಅರಿವು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಿಗುವ ಕಾನೂನು ನೆರವು ತಿಳಿಸುವಲ್ಲಿ ಅರೆಕಾಲಿಕ ಸ್ವಯಂ ಸೇವಕರ ಸೇವೆ ಅಗತ್ಯವಾಗಿದೆ. ಸ್ವಯಂ ಸೇವಕರು ಸಮಾಜ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಓಟ್ಲಾಡ್ ಇಂಡಿಯಾ ಪೌಂಡೇಷನ್ನ ವಂದನಾ ಕೆ ಹಾಗೂ ತುಷಿತಾ ಎಸ್. ಉಪನ್ಯಾಸ ನೀಡಿದರು.
ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಜಿ.ಶಿವಳ್ಳಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶರಾದ ಎನ್.ಎಂ.ರಮೇಶ, ಮಹ್ಮದ್ ಅನ್ವರ ಹುಸೇನ ಮೊಗಲಾನಿ, ಶೋಭಾ ಬಿ.ಜಿ., ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ, ನ್ಯಾಯಾಧೀಶರಾದ ಆಕರ್ಷ ಎಂ., ಬಿಪಿನ್ ಎಚ್.ಎಂ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್.ಸಿ.ಸಿದ್ದನಗೌಡರ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 