ಅರೆಕಾಲಿಕ ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ

ಅರೆಕಾಲಿಕ ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ Part-time volunteer training workshop

        ಹಾವೇರಿ 07 : ನಿಸ್ವಾರ್ಥ ಮನೋಭಾವದಿಂದ ಸಮಾಜ ಸೇವೆ ಮಾಡಬೇಕು, ಅಂದಾಗ ಮಾತ್ರ ಸಮಾಜದಲ್ಲಿನ ಜನರು ಕಾನೂನು ಅರಿವು ಹೊಂದಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರಾ​‍್ಪ ಎನ್‌. ಅವರು ಹೇಳಿದರು. 

ನಗರದ ಜಿಲ್ಲಾ ಗುರುಭವನದಲ್ಲಿ ಬುಧವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಓಟ್‌ಲಾಡ್ ಇಂಡಿಯಾ ಪೌಂಡೇಷನ್ ಸಹಯೋಗದಲ್ಲಿ  ಅರೆಕಾಲಿಕ ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. 

ಪ್ರತಿ ಮನೆ ಹಾಗೂ ಮನ ಮನಕ್ಕೂ ಕಾನೂನಿನ ಅರಿವು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಿಗುವ  ಕಾನೂನು ನೆರವು ತಿಳಿಸುವಲ್ಲಿ ಅರೆಕಾಲಿಕ ಸ್ವಯಂ ಸೇವಕರ ಸೇವೆ ಅಗತ್ಯವಾಗಿದೆ. ಸ್ವಯಂ ಸೇವಕರು ಸಮಾಜ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. 

ಓಟ್‌ಲಾಡ್ ಇಂಡಿಯಾ ಪೌಂಡೇಷನ್‌ನ ವಂದನಾ ಕೆ ಹಾಗೂ ತುಷಿತಾ ಎಸ್‌. ಉಪನ್ಯಾಸ ನೀಡಿದರು.  

ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಜಿ.ಶಿವಳ್ಳಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶರಾದ ಎನ್‌.ಎಂ.ರಮೇಶ, ಮಹ್ಮದ್ ಅನ್ವರ ಹುಸೇನ ಮೊಗಲಾನಿ,   ಶೋಭಾ ಬಿ.ಜಿ., ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ  ಶ್ರೀಶೈಲಜಾ ಎಚ್‌.ವಿ, ನ್ಯಾಯಾಧೀಶರಾದ ಆಕರ್ಷ ಎಂ., ಬಿಪಿನ್ ಎಚ್‌.ಎಂ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಚ್‌.ಸಿ.ಸಿದ್ದನಗೌಡರ ಇತರರು ಉಪಸ್ಥಿತರಿದ್ದರು.