ಸ್ಪರ್ಧೆಗಳಲ್ಲಿ ಭಾಗವಹಿಸುವುದು ಗೆಲುವಿಗೆ ಸಮ ಹಿ ಡಾ. ಎ. ಎಮ್.ಖಾನ್
Participation in competitions equals victory Dr. A. M. Khan
ಲೋಕದರ್ಶನ ವರದಿ
ಧಾರವಾಡ 12: ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಭಾಗವಹಸಿಉವುದು ವ್ಯಕ್ತಿತ್ವ ವಿಕಸನಕ್ಕೆ ರಹದಾರಿ. ಸ್ಪರ್ಧೆಗಳನ್ನು ಸವಾಲಾಗಿ ಸ್ವಿಕರಿಸಬೇಕು ಇದು ಜೀವನ ಯಶಸ್ಸು ಗೊಳ್ಳಲು ಸಹಕಾರಿಯಾಗುತ್ತದೆ. ಅವಕಾಶಗಳು ಬಂದಾಗ ಅದನ್ನು ಸರಿಯಾಗಿ ಸದುಪಯೋಗ ಪಡೆದಕೊಂಡು ಯಶಸ್ಸನ್ನು ಪಡೆದುಕೊಳ್ಳಿ ಎಂದು ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಉತ್ಸವ ಸಂಕಲ್ಪ-2026 ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಿದ್ಯಾಥಿಗಳನ್ನು ಉದ್ದೇಶಿಸಿ ಕ.ವಿ.ವಿಯ ಉಪಕುಲಪತಿಗಲಾದ ಡಾ. ಎ.ಎಮ್ ಖಾನ ಮಾತನಾಡುತ್ತಿದ್ದರು. ಸ್ಪರ್ಧೆಗಳಲ್ಲಿ ಭಾಗವಹಿಸುವುದು ಗೆಲುವಿಗೆ ಸಮ. ಪ್ರಶಸ್ತಿಗಳು ಬರಲಿ ಬಿಡಲಿ ಅದರ ಅನುಭವ ಮಾತ್ರ ಜೀವನಕ್ಕೆ ಪಾಠವಾಗಲಿದೆ ಸ್ಪರ್ಧೆಗಳ ಆಯೋಜನೆ ಕೂಡ ಒಂಡು ಕಲೆ ಇದನ್ನು ವಿದ್ಯಾರ್ಜನೆ ಮಟ್ಟದಲ್ಲಿ ನೀವು ಕಲಿತರೆ ಮುಂದೆ ಬಹದೊಡ್ಡ ಜವಾಬ್ದಾರಿಗಳನ್ನು ನಿಭಾಯಿಸಬಹುದು ಎಂದು ಹೇಳಿದರು.
ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಮಾತನಾಡುತ್ತಾ ಈ ಸಂಕಲ್ಪ ಉತ್ಸವದಲ್ಲಿ 60 ಕ್ಕಿಂತ ಹೆಚ್ಚು ಕಾಲೇಜುಗಳಿಂದ 800 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಅನಾವರಣಗೊಳಿಸಿದ್ದಾರೆ. ಯಾವುದೇ ಅವ್ಯವಸ್ಥೆಯಾಗದಂತೆ ಈ ಕಾರ್ಯಕ್ರಮ ಯಶಸ್ವಿಯಾಗಲು ಆಯೋಜಕರು ಶಿಕ್ಷಕರು-ಶಿಕ್ಷಕೇತರ ಮತ್ತು ವಿದ್ಯಾಥಿಗಳ ಶ್ರಮ ಶ್ಲಾಘನೀಯ. ಆ ಕೇವಲ ಸ್ಫರ್ಧೆಯಲ್ಲ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬಲ್ಲ ಒಂದು ಯೋಜನೆ ಏಕೆಂದರೆ ಈ ಉತ್ಸವದಿಂದಾಗಿ ವಿದ್ಯಾರ್ಥಿಗಳು ತಮ್ಮ ಜೀವನದ ಪರಿಸ್ಥಿತಿಗಳನ್ನು ಹೇಗೆ ನಿಭಾಯಿಸಬಲ್ಲರು ಎಂಬುದನ್ನು ಕಲಿಯುತ್ತಾರೆ. ತಮ್ಮಲ್ಲಿರುವ ಕುಂದುಕೋರತೆಗಳನ್ನು ಸರಿಪಡಿಸಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುತ್ತಾರೆ. ಜೆ.ಎಸ್.ಎಸ್ ಅನ್ನ, ಜ್ಞಾನ, ಸಮಯ ಪ್ರಜ್ಞೆ, ಉದ್ಯೋಗ ಹಾಗೂ ಶಿಸ್ತಿಗೆ ಹೆಸರಾಗಿದೆ. ಇನ್ನು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಸಂಸ್ಥೆ ಶ್ರಮಿಸಲಿದೆ ಎಂದು ಹೇಳಿದರು.. ಈ ಸಮಾರಂಭದಲ್ಲಿ ಶ್ರೀಮತಿ ವಾಣಿಶ್ರೀ ಪ್ರಸಾದ, ಡಾ. ಸೂರಜ್ ಜೈನ್, ವಿವೇಕ ಲಕ್ಷ್ಮೇಶ್ವರ, ಡಾ. ಆರ್. ವಿ ಚಿಟಗುಪ್ಪಿ, ಡಾ. ಜಿನಪ್ಪ ಕುಂದಗೋಳ, ಶೃತಿ ಶೆಟ್ಟಿ, ಶ್ರವಣಕುಮಾರ ಯೋಗಿ ಇತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 