ಮೆಡಿಸಿನ್ ವಿಭಾಗದಲ್ಲಿ ಕಾಲೇಜ್ ಟಾಪರ್ ಆಗಿ ಉತ್ತೀರ್ಣ: ಅಭಿಷೇಕಸ್ವಾಮಿ
Passed as College Topper in Medicine: Abhishekaswamy
ಮೆಡಿಸಿನ್ ವಿಭಾಗದಲ್ಲಿ ಕಾಲೇಜ್ ಟಾಪರ್ ಆಗಿ ಉತ್ತೀರ್ಣ: ಅಭಿಷೇಕಸ್ವಾಮಿ
ಗಂಗಾವತಿ 29: ನಗರದ ಡಾ.ಅಭಿಷೇಕಸ್ವಾಮಿ ಹೇರೂರ ಎಮ್.ಡಿ.ಜನರಲ್ ಮೆಡಿಸಿನ್ ವಿಭಾಗದಲ್ಲಿ ಕಾಲೇಜ್ ಟಾಪರ್ ಆಗಿ ಉತ್ತೀರ್ಣರಾಗಿದ್ದಾರೆ.ಗಂಗಾವತಿ ನಗರದ ಸೇ0ಟ್ ಫಾಲ್ಸ್ ಮತ್ತು ಲಿಟಲ್ ಹಾರ್ಟ್ಸ ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅಭ್ಯಾಸವನ್ನು ಮುಗಿಸಿರುವ ಡಾ.ಅಭಿಷೇಕಸ್ವಾಮಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 98ಅ ಅಂಕಗಳನ್ನು ಗಳಿಸಿ ಜಿಲ್ಲಾ ಟಾಪರ್ ಎನಿಸಿಕೊಂಡಿದ್ದರು.ನಂತರ ಸತ್ಯ ಸಾಯಿ ಲೋಕಸೇವಾ ಟ್ರಸ್ಟ್ ನಡೆಸುವ ಅಳಿಕೆ ಗ್ರಾಮದ ಕಾಲೇಜ್ ನಲ್ಲಿ ಪಿ.ಯು.ಸಿ.ಅಭ್ಯಾಸ ಮಾಡಿ 97ಅ ಅಂಕಗಳಿಸಿ, ಸಿ.ಇ.ಟಿ.ಯಲ್ಲಿ ರಾಜ್ಯಕ್ಕೆ 261 ನೇ ರ್ಯಾಂಕ್ ಪಡೆದಿದ್ದರು.
ಸರಕಾರಿ ಮೈಸೂರು ಮೆಡಿಕಲ್ ಕಾಲೇಜ್ ನಲ್ಲಿ ಎಮ್.ಬಿ.ಬಿ.ಎಸ್.ಪದವಿ ಮುಗಿಸಿ,ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಮೆಡಿಕಲ್ ಕಾಲೇಜ್ ನಲ್ಲಿ ಎಮ್.ಡಿ.ಜನರಲ್ ಮೆಡಿಸಿನ್ ವಿಭಾಗದಲ್ಲಿ ಪ್ರವೇಶ ಪಡೆದಿದ್ದರು.ಡಾ.ಅಭಿಷೇಕಸ್ವಾಮಿ ಹೇರೂರ ಅವರ ಸಾಧನೆಗೆ ಕುಟುಂಬ ವರ್ಗ ಮತ್ತು ಓಷಧ ವ್ಯಾಪಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 