ಶಾಂತಿ ಮತ್ತು ಸಮಾನತೆಯೇ ಅಂಬೇಡ್ಕರ್ ರವರ ಧ್ಯೇಯವಾಗಿತ್ತು: ಉದಯ
Peace and equality were Ambedkar's motto: Udaya
ಹುಕ್ಕೇರಿ 06: ಶಾಂತಿ ಮತ್ತು ಸಮಾನತೆಯು ವಿಶ್ವದಲ್ಲಿ ಸದಾ ನೆಲೆಸಲು ಡಾ, ಬಿ ಆರ್ ಅಂಬೇಡ್ಕರ್ ರವರ ಧ್ಯೇಯ ವಾಗಿತ್ತು ಎಂದು ದಲಿತ ಮುಖಂಡ ಮಾಜಿ ಪುರಸಭೆ ಅದ್ಯಕ್ಷ ಉದಯ ಹುಕ್ಕೇರಿ ಹೇಳಿದರು.
ಡಾ. ಬಿ ಆರ್ ಅಂಬೇಡ್ಕರ್ ರವರ 59 ನೇ ಮಹಾಪರಿನಿರ್ವಾಣ ದಿನ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ಮತ್ತು ತಾಲೂಕಾ ಆಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ತಾಲೂಕಾ ದಂಡಾಧೀಕಾರಿ ಬಲರಾಮ ಕಟ್ಟಮನಿ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರೆ್ಣ ಮಾಡಿ ಚಾಲನೆ ನೀಡಿದರು. ನಂತರ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ದಲಿತ ಮುಖಂಡರು ತ್ರೀಸರಣ ಮತ್ತು ಪಂಚಶೀಲ ಪಠಣ ಮಾಡಿ ಕ್ಯಾಂಡಲ್ ಬೆಳಗಿದರು. ಮಾದ್ಯಮಗಳೊಂದಿಗೆ ಮಾತನಾಡಿದ ತಹಸಿಲ್ದಾರ ಬಲರಾಮ ಕಟ್ಟಿಮನಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಗುರುಶಾಂತ ಪಾವಟೆ ಇಂದು ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 59 ನೇ ಮಹಾಪರಿನಿರ್ವಾಣ ಅಂಗವಾಗಿ ತಾಲೂಕಿನ ಸಮಾಜದ ಮುಖಂಡರೊಂದಿಗೆ ಇಲಾಖೆ ಅಧಿಕಾರಿಗಳು ಅಂಬೇಡ್ಕರ್ ಭಾವ ಚಿತ್ರಕ್ಕೆ ನಮನ ಸಲ್ಲಿಸಿ ಸ್ಮರಣೆ ಮಾಡಲಾಗಿದೆ ಎಂದರು.
ನಂತರ ಡಾ, ಬಿ ಆರ್ ಅಂಬೇಡ್ಕರ್ ಪರ ಘೋಷಣೆಗಳನ್ನು ಹಾಕಿ ಪುಷ್ಪ ನಮನ ಸಲ್ಲಿಸಿದರು.ದಲಿತ ಮುಖಂಡ ಮಾಜಿ ಪುರಸಭೆ ಅದ್ಯಕ್ಷ ಉದಯ ಹುಕ್ಕೇರಿ ಮಾತನಾಡಿ ಇಂದು ಬಾಬಾಸಾಹೇಬರು ನಮ್ಮನ್ನು ಬಿಟ್ಟು 59 ವರ್ಷ ಗತಿಸಿದವು ಆದರೆ ಅವರ ಜ್ಞಾನದ ಅಡಿಯಲ್ಲಿ ಇಡಿ ವಿಶ್ವ ಸಾಗುತ್ತಿದೆ ಅದರಂತೆ ಶಾಂತಿ ಮತ್ತು ಸಮಾನತೆ ಎಲ್ಲರೂ ಮೈಗೂಡಿಸಿಕೋಳ್ಳ ಬೇಕು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರಿ ನೌಕರರ ಸಂಘದ ತಾಲೂಕಾ ಅದ್ಯಕ್ಷ ಅವಿನಾಶ ಹೋಳೆಪ್ಪಗೋಳ,ದಲಿತ ಮುಖಂಡರಾದ ಕೆಂಪಣ್ಣ ಶಿರಹಟ್ಟಿ, ರಮೇಶ ಹುಂಜಿ, ಬಾಹುಸಾಹೇಬ ಪಾಂಡ್ರೆ, ಕಿರಣ ಬಾಗೆವಾಡಿ, ಶಶಿಕಾಂತ ಹೋನ್ನಳ್ಳಿ, ಕೆ ಪಿ ಶಿರಗಾಂವಕರ, ಡಾ, ಕಾಡಪ್ಪ ಹೋಸಮನಿ, ಅಧಿಕಾರಿಗಳಾದ ಮಹೇಶ ಭಜಂತ್ರಿ, ಎಲ್ ಬಿ ಮಾಲದಾರ, ಎಸ್ ಜೆ ಗುಂದಗಿ, ಆರ್ ಎ ಜಕಬಾಳ, ಸಂತೋಷ ಮಾಲಗಿತ್ತಿಮಠ,ಶೇಟ್ಟೆಪ್ಪಾ ಹರಿಜನ, ಅರುಣಾ ಇಂಗಳೆ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 