ಹೋಳಿ ಹಬ್ಬದ ನಿಮಿತ್ಯ ಶಾಂತಿ ಪಾಲನೆ ಸಭೆ
Peacekeeping meeting on the occasion of Holi festival
ಯರಗಟ್ಟಿ, 28 : ಸಮೀಪದ ಗ್ರಾಮದಲ್ಲಿ ಹೋಳಿ ಹಬ್ಬ ಐತಿಹಾಸಿಕ ಮಹತ್ವ ಹೊಂದಿದ್ದು, ಯಾವುದೇ ರೀತಿಯ ಗೊಂದಲ ಗಲಾಟೆಗಳಿಗೆ ಅವಕಾಶ ನೀಡದಂತೆ ಶಾಂತಿಯುತ ಹಬ್ಬ ಆಚರಣೆ ನಡೆಯಲಿ ಎಂದು ಮುರಗೋಡ ಠಾಣೆ ಪಿಎಸ್ಐ ಡಬ್ಲೂ.ಎಚ್.ಯಾದವಾಡ ಹೇಳಿದರು. ಗ್ರಾಮದ ಮಾರುತಿ ಮಂದಿರ ಸಭಾಭವನದಲ್ಲಿ ಹೋಳಿ ಹಾಗೂ ರಂಜಾನ ಹಬ್ಬದ ಅಂಗವಾಗಿ ಶುಕ್ರವಾರ ಹಮ್ಮಿಕೊಡಿದ್ದ ಶಾಂತಿ ಪಾಲನೆ ಸಭೆಯಲ್ಲಿ ಮಾತನಾಡಿದರು. ಪಿಡಿಒ ರಾಘವೇಂದ್ರಕುಮಾರ ಎಸ್.ಪಿ, ಮಾತನಾಡಿ, ಗ್ರಾಮದ ಯುವಕರು ವಾರ್ನಿಸ ತತ್ತಿ ಎಸೆಯುವದನ್ನು ನಿಷೇಧಿಸಲಾಗಿದ್ದು. ನೈಸರ್ಗಿಕ ಬಣ್ಣಗಳನ್ನು ಉಪಯೋಗಿಸಬೇಕು ದ್ವಿತೀಯ ಪಿಯುಸಿ ಪರೀಕ್ಷೆ ಇರುವದರಿಂದ ಬಲವಂತವಾಗಿ ಬಣ್ಣ ಎರಚಬಾರದು ಎಂದರು.ಹುಸೇನಬಿ ಕುದರಿ, ಮಹಾದೇವ ಬೆನಕಟ್ಟಿ, ಪಕ್ರುಸಾಬ ಬಾಗವಾನ, ನೀಲಕಂಠ ಹಂಜಿ, ಬಸವಣ್ಣೆಪ್ಪ ಕಲಬಸನ್ನವರ, ಮಂಜುನಾಥ ಬಂದಕನವರ, ಅರುಣ ವನ್ನೂರ, ಪರಸಪ್ಪ ಮಾದರ ಸಂಜೀವಿನಿ ಮಹಿಳಾ ಸಂಘದ ಸದಸ್ಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 