ಕ್ರೀಡೆಯಿಂದ ವಿದ್ಯಾಥರ್ಿಗಳ ದೈಹಿಕ-ಮಾನಸಿಕ ಸಾಮಥ್ರ್ಯ ವೃದ್ಧಿ: ಡಾ. ಯರಗೊಪ್ಪ
ಲೋಕದರ್ಶನ ವರದಿ
ಹಾವೇರಿ13: ಕ್ರೀಡೆಗಳಿಂದ ವಿದ್ಯಾಥರ್ಿಗಳ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯ ವಿಕಾಸಗೊಂಡು ವೃದ್ಧಿಗೊಳ್ಳುತ್ತದೆ ಎಂದು ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ 55 ನೇ ವಾಷರ್ಿಕ ಕ್ರೀಡಾಕೂಟದಲ್ಲಿ ಪದವಿ ಪ್ರಾಚಾರ್ಯ ಡಾ. ಎಮ್. ಎಸ್. ಯರಗೊಪ್ಪ ಹೇಳಿದರು.
ಪ್ರಸ್ತುತ ತಾಂತ್ರಿಕ ಯುಗದಲ್ಲಿ ಯಾಂತ್ರಿಕ ಬದುಕಿಗೆ ಅಂಟಿಕೊಂಡಿರುವ ಯುವಸಮೂಹ ಅವುಗಳಿಂದ ಹೊರಬಂದು ಪ್ರಾಚೀನ ಪರಂಪರಾಗತ ಕ್ರೀಡೆಗಳಲ್ಲಿ ಪಾಲ್ಗೊಂಡು ದೈಹಿಕ ಆರೋಗ್ಯ ಮತ್ತು ಮಾನಸಿಕ ಸ್ಥಿರತೆಯನ್ನು ಸಾಧಿಸಿಕೊಳ್ಳುವತ್ತ ಕಿವಿಗೊಡಬೇಕಿದೆ. ಬದಲಾಗುತ್ತಿರುವ ಸನ್ನಿವೇಶದಲ್ಲಿ ಶಿಕ್ಷಣದೊಟ್ಟಿಗೆ ದೈಹಿಕ ಶಿಕ್ಷಣವೂ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದು, ವಿದ್ಯಾಥರ್ಿಗಳು ಓದಿನೊಟ್ಟಿಗೆ ಕ್ರೀಡೆಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳಬೇಕಿದೆ. ಆರೋಗ್ಯ ಮತ್ತು ಸ್ವಾಸ್ಥ್ಯ ಕಾಪಾಡಿಕೊಳ್ಳುವ ಅವಶ್ಯಕತೆ ಪ್ರತಿಯೊಬ್ಬರಿಗೂ ಇಂದು ಅಧಿಕವಿದ್ದು ವಾಸ್ತವ ಅರಿತು ಮುನ್ನಡೆಯಬೇಕಿದೆ. ಸ್ಪಧರ್ೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡಾಸ್ಪೂತರ್ಿ ಮತ್ತು ಭಾಗವಹಿಸುವಿಕೆ ಮುಖ್ಯವಾದದ್ದು. ಸೋಲೇ ಗೆಲುವಿನ ಮೆಟ್ಟಿಲು ಎಂಬುದನ್ನು ಯಾರೂ ಮರೆಯಬಾರದು ಎಂದು ಕ್ರೀಡಾಳುಗಳಿಗೆ ಕಿವಿಮಾತು ಹೇಳಿದರು.
ಆರಂಭದಲ್ಲಿ ಕ್ರೀಡಾ ವಿಭಾಗದ ಕಾರ್ಯದಶರ್ಿ ಡಾ. ಬಿ. ಎನ್. ವಾಸುದೇವನಾಯಕ ಸ್ವಾಗತಿಸಿದರು. ಪದವಿಪೂರ್ವ ಪ್ರಾಚಾರ್ಯ ಪ್ರೊ. ಜೆ. ಆರ್. ಶಿಂಧೆ ಕ್ರೀಡಾಳುಗಳಿಗೆ ಪ್ರಮಾಣವಚನ ಬೋಧಿಸಿದರು. ಪ್ರೊ. ಡಿ. ಎ. ಕೊಲ್ಲಾಪುರೆ ನಿರೂಪಿಸಿದರು. ದೈಹಿಕ ಶಿಕ್ಷಣ ನಿದರ್ೇಶಕ ಪ್ರೊ. ಕೊಟ್ರೇಶ್ ದೇವರಮನೆ ವಂದಿಸಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 