ಕ್ರೀಡೆಯಿಂದ ವಿದ್ಯಾಥರ್ಿಗಳ ದೈಹಿಕ-ಮಾನಸಿಕ ಸಾಮಥ್ರ್ಯ ವೃದ್ಧಿ: ಡಾ. ಯರಗೊಪ್ಪ
ಲೋಕದರ್ಶನ ವರದಿ
ಹಾವೇರಿ13: ಕ್ರೀಡೆಗಳಿಂದ ವಿದ್ಯಾಥರ್ಿಗಳ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯ ವಿಕಾಸಗೊಂಡು ವೃದ್ಧಿಗೊಳ್ಳುತ್ತದೆ ಎಂದು ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ 55 ನೇ ವಾಷರ್ಿಕ ಕ್ರೀಡಾಕೂಟದಲ್ಲಿ ಪದವಿ ಪ್ರಾಚಾರ್ಯ ಡಾ. ಎಮ್. ಎಸ್. ಯರಗೊಪ್ಪ ಹೇಳಿದರು.
ಪ್ರಸ್ತುತ ತಾಂತ್ರಿಕ ಯುಗದಲ್ಲಿ ಯಾಂತ್ರಿಕ ಬದುಕಿಗೆ ಅಂಟಿಕೊಂಡಿರುವ ಯುವಸಮೂಹ ಅವುಗಳಿಂದ ಹೊರಬಂದು ಪ್ರಾಚೀನ ಪರಂಪರಾಗತ ಕ್ರೀಡೆಗಳಲ್ಲಿ ಪಾಲ್ಗೊಂಡು ದೈಹಿಕ ಆರೋಗ್ಯ ಮತ್ತು ಮಾನಸಿಕ ಸ್ಥಿರತೆಯನ್ನು ಸಾಧಿಸಿಕೊಳ್ಳುವತ್ತ ಕಿವಿಗೊಡಬೇಕಿದೆ. ಬದಲಾಗುತ್ತಿರುವ ಸನ್ನಿವೇಶದಲ್ಲಿ ಶಿಕ್ಷಣದೊಟ್ಟಿಗೆ ದೈಹಿಕ ಶಿಕ್ಷಣವೂ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದು, ವಿದ್ಯಾಥರ್ಿಗಳು ಓದಿನೊಟ್ಟಿಗೆ ಕ್ರೀಡೆಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳಬೇಕಿದೆ. ಆರೋಗ್ಯ ಮತ್ತು ಸ್ವಾಸ್ಥ್ಯ ಕಾಪಾಡಿಕೊಳ್ಳುವ ಅವಶ್ಯಕತೆ ಪ್ರತಿಯೊಬ್ಬರಿಗೂ ಇಂದು ಅಧಿಕವಿದ್ದು ವಾಸ್ತವ ಅರಿತು ಮುನ್ನಡೆಯಬೇಕಿದೆ. ಸ್ಪಧರ್ೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡಾಸ್ಪೂತರ್ಿ ಮತ್ತು ಭಾಗವಹಿಸುವಿಕೆ ಮುಖ್ಯವಾದದ್ದು. ಸೋಲೇ ಗೆಲುವಿನ ಮೆಟ್ಟಿಲು ಎಂಬುದನ್ನು ಯಾರೂ ಮರೆಯಬಾರದು ಎಂದು ಕ್ರೀಡಾಳುಗಳಿಗೆ ಕಿವಿಮಾತು ಹೇಳಿದರು.
ಆರಂಭದಲ್ಲಿ ಕ್ರೀಡಾ ವಿಭಾಗದ ಕಾರ್ಯದಶರ್ಿ ಡಾ. ಬಿ. ಎನ್. ವಾಸುದೇವನಾಯಕ ಸ್ವಾಗತಿಸಿದರು. ಪದವಿಪೂರ್ವ ಪ್ರಾಚಾರ್ಯ ಪ್ರೊ. ಜೆ. ಆರ್. ಶಿಂಧೆ ಕ್ರೀಡಾಳುಗಳಿಗೆ ಪ್ರಮಾಣವಚನ ಬೋಧಿಸಿದರು. ಪ್ರೊ. ಡಿ. ಎ. ಕೊಲ್ಲಾಪುರೆ ನಿರೂಪಿಸಿದರು. ದೈಹಿಕ ಶಿಕ್ಷಣ ನಿದರ್ೇಶಕ ಪ್ರೊ. ಕೊಟ್ರೇಶ್ ದೇವರಮನೆ ವಂದಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 