ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
Police cordon off the encroached area
ಅತಿಕ್ರಮಣ ಮಾಡಿಕೊಂಡಿರುವ ಜಾಗಕ್ಕೆ ಪೊಲೀಸ್ ಬಂದೋಬಸ್ತ
ರಾಯಬಾಗ, 11 ; ತಾಲೂಕಿನ ಚಿಂಚಲಿ ಪಟ್ಟಣದ ಸರ್ಕಾರಿ ಜಾಗ ರಿ.ಸ.ನಂ.400ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿರುವ ಜಾಗವನ್ನು ತಹಶೀಲ್ದಾರ ಸುರೇಶ ಮುಂಜೆ ಅವರ ಸಮ್ಮುಖದಲ್ಲಿ ಪೊಲೀಸ್ ಬಂದೋಬಸ್ತದೊಂದಿಗೆ ಸರ್ವೇ ಇಲಾಖೆಯವರು ಸೋಮವಾರ ಸರ್ವೇ ಕಾರ್ಯ ನಡೆಸಿದರು.
ಪ.ಪಂ.ಮುಖ್ಯಾಧಿಕಾರಿ ವಿ.ಬಿ.ಬಳ್ಳಾರಿ ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕ ಉಚ್ಛನ್ಯಾಯಾಲಯದ ಆದೇಶದಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಚಿಂಚಲಿ ಪಟ್ಟಣದ ಪ.ಪಂ.ಆಸ್ತಿ ನಂ.1015/1 (ರಿ.ಸ.ನಂ.400ರ ಕ್ಷೇತ್ರ 2ಎಕರೆ 10ಗುಂಟೆ) ರಲ್ಲಿ ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡರುವ ಸರ್ಕಾರಿ ಜಾಗೆಯನ್ನು ಸೋಮವಾರ ಸರ್ವೇ ಇಲಾಖೆಯವರು ಸರ್ವೇ ಕಾರ್ಯ ಮಾಡಿದ್ದಾರೆ. ಸರ್ವೇ ಇಲಾಖೆಯವರು ಸಲ್ಲಿಸುವ ವರದಿಯನ್ನು ಪಡೆದುಕೊಂಡು, ಮುಂದಿನ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 