ಅಪರಿಚಿತ ಶವ ಅಂದ್ಕೊಂಡು ಅಂತ್ಯಸಂಸ್ಕಾರ ಮಾಡಿದ ಪೊಲೀಸರು...!
Police cremated the body, thinking it was an unknown body...!
ಅಪರಿಚಿತ ಶವ ಅಂದ್ಕೊಂಡು ಅಂತ್ಯಸಂಸ್ಕಾರ ಮಾಡಿದ ಪೊಲೀಸರು...!
ರಾಣೇಬೆನ್ನೂರು 15: ಸಾಮಾನ್ಯವಾಗಿ ಯಾವುದೇ ಅಪರಿಚಿತ ಶವ ಸಿಕ್ಕರೂ ಕನಿಷ್ಠ ಆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಮಿಸ್ಸಿಂಗ್ ಕಂಪ್ಲೇಂಟ್ಗಳನ್ನು ನೋಡಿ ಅವರಿಗೆ ತಿಳಿಸುವುದು ಪೊಲೀಸ್ ಇಲಾಖೆಯ ವಾಡಿಕೆ. ಅದರಲ್ಲೂ ಮಹಿಳೆ, ಯುವತಿ, ಅಪ್ರಾಪ್ತ ಯುವತಿ ಆಗಿದ್ದಲ್ಲಿ ಪೊಲೀಸರು ಇನ್ನಷ್ಟು ಎಚ್ಚರಿಕೆಯಿಂದ ಈ ಕೆಲಸ ಮಾಡುತ್ತಾರೆ. ಮಾಡಬೇಕಾಗುತ್ತದೆ. ಆದರೆ, ರಾಣೇಬೆನ್ನೂರು ತಾಲೂಕಿನ ಹಲಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗ 22 ವರ್ಷದ ಯುವತಿಯ ಕೊಲೆ ಆಗಿದ್ದು, ಅಪರಿಚಿತ ಶವ ಎಂದುಕೊಂಡು ಪೊಲೀಸರೇ ಅಂತ್ಯಸಂಸ್ಕಾರ ಮಾಡಿರುವ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಯಲ್ಲಿ ಯುವತಿಯ ಕೊಲೆಯಾಗಿರುವ ದೃಢವಾದ ಬೆನ್ನಲ್ಲಿಯೇ ಯಾವುದೇ ಮಾಹಿತಿ ನೀಡದೇ ಅಂತ್ಯಸಂಸ್ಕಾರ ಮಾಡಿದ ಪೊಲೀಸರಿಗೆ ಸಂಕಷ್ಟ ಎದುರಾಗಿದೆ. ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಮಾಸೂರು ಗ್ರಾಮದ ಯುವತಿ 22 ವರ್ಷದ ಸ್ವಾತಿ ಬ್ಯಾಡಗಿ ಮಾರ್ಚ್ 3 ರಂದು ನಾಪತ್ತೆಯಾಗಿದ್ದಳು. ಮೂರು ದಿನಗಳ ಕಾಲ ಮನೆಯವರೆಲ್ಲಾ ಹುಡುಕಿ 7ನೇ ತಾರೀಖಿನಿಂದ ಮಿಸ್ಸಿಂಗ್ ದೂರು ದಾಖಲಿಸಿದ್ದಾರೆ. ಆದರೆ ಇದೀಗ ಸ್ವಾತಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದ ತುಂಗಭದ್ರಾ ನದಿ ಬಳಿ ಪತ್ತೆಯಾಗಿತ್ತು. ಮಾರ್ಚ್ 6 ರಂದು ಯುವತಿಯ ಮೃತದೇಹ ಸಿಕ್ಕಿತ್ತು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 