ಜಾಗತಿಕ ಹಬ್ಬವಾಗಿ ಪೊಂಗಲ್ ಆಚರಣೆ
Pongal celebration as a global festival
ನವದೆಹಲಿ: ಸಂಕ್ರಾಂತಿ (ಪೊಂಗಲ್) ಹಬ್ಬ ಇದೀಗ ಜಾಗತಿಕ ಹಬ್ಬವಾಗಿ ಹೊರಹೊಮ್ಮಿದೆ. ಪ್ರಕೃತಿಯೊಂದಿಗೆ ಸಮತೋಲನ ಕಾಪಾಡಿಕೊಳ್ಳುವ ಸಂದೇಶವನ್ನು ಈ ಹಬ್ಬ ಜಗತ್ತಿಗೆ ಸಾರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೇಂದ್ರ ಸಚಿವ ಎಲ್. ಮುರಗನ್ ಮನೆಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಪೊಂಗಲ್ ಆಚರಣೆಯಲ್ಲಿ ಭಾಗಿಯಾಗಿದರು. ಈ ಹಬ್ಬವು ರೈತರ ಕಠಿಣ ಪರಿಶ್ರಮಕ್ಕೆ ಪ್ರತಿಬಿಂಬ. ಸಂಕ್ರಾಂತಿ ಹಬ್ಬದ ಆಚರಣೆಯ ಮೂಲಕ ಭೂಮಿ ಮತ್ತು ಸೂರ್ಯನಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.
ತಮಿಳು ಸಂಸ್ಕೃತಿಯು ವಿಶ್ವದ ಅತ್ಯಂತ ಹಳೆಯ ನಾಗರಿಕತೆಗಳಲ್ಲಿ ಒಂದಾಗಿದೆ. ಶತಮಾನಗಳ ಜ್ಞಾನ ಮತ್ತು ಸಂಪ್ರದಾಯ ಒಳಗೊಂಡಿದೆ. ಈ ಪರಂಪರೆಯಿಂದ ಪ್ರೇರಿತರಾಗಿ ಇಂದಿನ ಭಾರತವು ಮುಂದುವರಿಯುತ್ತಿದೆ. ಸಾಂಸ್ಕೃತಿಕ ಬೇರುಗಳಿಂದ ದೇಶವು ಮತ್ತಷ್ಟು ಬಲಪಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.
ಈ ಹಬ್ಬವು ಕೃಷಿ, ರೈತರು, ಗ್ರಾಮೀಣ ಬದುಕಿನೊಂದಿಗೆ ಸಂಬಂಧ ಹೊಂದಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ಪೊಂಗಲ್ ಕೇವಲ ಹಬ್ಬವಲ್ಲ. ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಬೇಕು. ಭೂಮಿಯು ನಮಗೆ ಇಷ್ಟೊಂದು ನೀಡುತ್ತಿರುವಾಗ ಅದನ್ನು ಪಾಲಿಸುವುದು ಮತ್ತು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 