ಮಹಾ ಪರಿನಿರ್ವಾಣ ದಿನ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚಣೆ
Pooja, floral tributes to BR Ambedkar's portrait on Maha Parinirvan Day
ಧಾರವಾಡ ಡಿ.5: ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾಚರಣೆ ನಿಮಿತ್ತ ಇಂದು ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ (ಜುಬ್ಲಿ) ವೃತ್ತದ ಹತ್ತಿರವಿರುವ ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸೇರಿದಂತೆ ಗಣ್ಯರಿಂದ ಮಾಲಾರೆ್ಣ, ಪುಷ್ಾರೆ್ಪಣ ಕಾರ್ಯಕ್ರಮ ಜರುಗಿತು.
ನಂತರ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚಣೆ ಮಾಡಿ, ಅವರು ನಮಿಸಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ ಡಾ. ಡಿ.ಎಚ್.ಹೂಗಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ.ಶುಭ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಸಮಾಜದ ಮುಖಂಡರಾದ ಎಮ್.ಅರವಿಂದ, ಲಕ್ಷ್ಮಣ ಬಕ್ಕಾಯಿ ಸೇರಿದಂತೆ ವಿವಿಧ ಪ್ರಮುಖರು ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 