ರೈತರ ಪಂಪ್ ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಡಿತ: ಅಧಿಕಾರಿಗಳಿಗೆ ಮನವಿ
Power cut to farmers' pump sets: Appeal to authorities
ರೈತರ ಪಂಪ್ ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಡಿತ: ಅಧಿಕಾರಿಗಳಿಗೆ ಮನವಿ
ಧಾರವಾಡ 10: ಜಿಲ್ಲೆಯ ಕಲಘಟಗಿ ತಾಲೂಕಿನ ಬಿ ಗುಡಿಹಾಳ ಸೇರಿದಂತ ವಿವಿಧ ಗ್ರಾಮಗಳಲ್ಲಿ ರೈತರಿಗೆ ಯಾವುದೇ ಮುನ್ಸೂಚನೆ ನೀಡದೆ ರೈತರ ಪಂಪ್ ಸೆಟ್ಗಳಿಗೆ ವಿದ್ಯುತ್ ಸಂಪರ್ಕಕಡಿತ ಮಾಡಿರುವುದನ್ನು ಈ ಕೂಡಲೇ ಸಂಪರ್ಕ ನೀಡಬೇಕೆಂದು ಒತ್ತಾಯಿಸಿ ಅಖಿಲ ಭಾರತರೈತ ಕೃಷಿ ಕಾರ್ಮಿಕರ ಸಂಘಟನೆ ಧಾರವಾಡ ಜಿಲ್ಲಾ ಸಮಿತಿ, ಹೆಸ್ಕಾಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ ಎಮ್ ದೊಡ್ಡಮನೆ ಅವರಿಗೆ ಮನವಿ ಸಲ್ಲಿಸಲಾಯಿತು. ಕಲಘಟಗಿ ತಾಲೂಕಿನ ಬಿ ಗುಡಿಹಾಳ ಗ್ರಾಮದ ರೈತರಿಗೆ ಆರ್ಆರ್ ನಂಬರ್ ಇಲ್ಲ ಎಂಬ ನೆಪವಡ್ಡಿ, ರೈತರಿಗೆ ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿಯಾಗಿ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಕಡಿತ ಮಾಡಿರುವುದರಿಂದ ರೈತರ ಹೊಲದಲ್ಲಿ ಬೆಳೆದಿರುವ ಗೋಂಜಾಳ, ತರಕಾರಿ, ಹೂ, ಸೋಯಾಬೀನ್ ಮುಂತಾದ ಬೆಳೆಗಳು ಬಾಡಿ ಹೋಗುತ್ತಿವೆ. ರೈತರ ಈಗಾಗಲೇ ಸಾಲ ಸೋಲ ಮಾಡಿ ಬಿತ್ತನೆ ಮಾಡಿದ್ದಾರೆ, ಏಕಾಏಕಿ ಸಾವಿರಾರು ರೂಪಾಯಿ ಕಟ್ಟಬೇಕೆಂದರೆ ರೈತರ ಸಂಕಷ್ಟಕ್ಕೆ ಸಿಲುಕುತ್ತಾರೆ. ಆದಕಾರಣ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿ, ಆರ್ಆರ್ ನಂಬರ್ ಪಡೆಯುವುದಕ್ಕೆ ಕಾಲಾವಕಾಶ ನೀಡಬೇಕೆಂದು ಒತ್ತಾಯಿಸಿ ಹೆಸ್ಕಾಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ದೀಪಾ ಧಾರವಾಡ, ಕಾರ್ಯದರ್ಶಿ ಶರಣು ಗೋನವಾರ, ಬಸ್ಸಪ್ಪ ಕಲಘಟಗಿ ತಾಲೂಕ ಸಮಿತಿ ಸದಸ್ಯರಾದ ಸಂತೋಷ ಗೋರೆ್ಡ, ಶಿವಾಜಿ ಕಾಳೋಜಿ, ಶಿವಲಿಂಗಪ್ಪ ಉಣಕಲ್ ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 