ರಂಭಾಪೂರಿ ಶ್ರೀಗಳಿಂದದರ್ಶನ ಪಡೆದ ಪ್ರಲ್ಹಾದಜೋಷಿ
Pralhad Joshi received darshan from Rambhapuri Shri
ರಂಭಾಪೂರಿ ಶ್ರೀಗಳಿಂದದರ್ಶನ ಪಡೆದ ಪ್ರಲ್ಹಾದಜೋಷಿ
ಶಿಗ್ಗಾವಿ 14: ಬಂಕಾಪೂರ ಪಟ್ಟಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅರಳೇಲೆ ಮಠಕ್ಕೆ ಬೇಟಿ ನೀಡಿ, ರಂಭಾಪೂರಿ ಜಗದ್ಗುರುಗಳ ದರ್ಶನ ಪಡೆದು ಆಶೀರ್ವಾದ ಪಡೆದರು. ನಂತರ ಜಗದ್ಗುರುಗಳೊಂದಿಗೆ ನಡೆದ ಸೌಹಾರ್ದ ಚರ್ಚೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮಠಹಿಮಂದಿರಗಳ ಮೇಲಿನ ಅನಗತ್ಯ ಅಪವಾದಗಳು ಮತ್ತು ಧಾರ್ಮಿಕ ಕೇಂದ್ರಗಳ ಬಗ್ಗೆ ಕೆಲವು ವಲಯಗಳಲ್ಲಿ ಹಬ್ಬುತ್ತಿರುವ ತಪ್ಪು ಕಲ್ಪನೆಗಳ ಕುರಿತು ಉಲ್ಲೇಖಿಸಿಜಗದ್ಗುರುಗಳು ಹಿಂದೂ ಮಠ ಮತ್ತು ಮಂದಿರಗಳ ಐತಿಹಾಸಿಕ ಮಹತ್ವ, ಸಮಾಜಕ್ಕೆ ನೀಡುತ್ತಿರುವ ಶೈಕ್ಷಣಿಕ ಮತ್ತು ಧಾರ್ಮಿಕ ಸೇವೆಗಳನ್ನು ವಿವರಿಸಿದರು.ಹಿಂದೂ ಮಠಹಿಮಂದಿರಗಳ ಹಿತಾಸಕ್ತಿಹಾಗೂ ಆಸ್ತಿಪಾಸ್ತಿಗಳನ್ನು ರಕ್ಷಿಸಲು ವಿಶೇಷ ಕಾನೂನು ರೂಪಿಸಲು ಅಗತ್ಯವಿದೆ ಎಂದು ಕೇಂದ್ರ ಸಚಿವರಿಗೆ ಸಲಹೆ ನೀಡಿದರು. ಪ್ರಲ್ಹಾದ ಜೋಷಿಯವರು ಜಗದ್ಗುರುಗಳ ಸಲಹೆಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ತಿಳಿಸಿ, ಧಾರ್ಮಿಕ ಕೇಂದ್ರಗಳ ರಕ್ಷಣೆಗೆ, ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡಲು ಮೋದಿ ಸರ್ಕಾರ ಬದ್ಧವಾಗಿದೆ ಎಂದರು. ಈ ಸಂದರ್ಭದಲ್ಲಿ ಭಾಜಪ ಪಕ್ಷದ ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 