ಪ್ರಸನ್ನ ಜೋಶಿಗೆ ಮಂತ್ರಾಲಯದ ಶ್ರೀಗಳಿಂದ ಗೌರವ ಡಾಕ್ಟರೇಟ್ ಪ್ರದಾನ
Prasanna Joshi awarded honorary doctorate by the Ministry of Mantralaya
ಧಾರವಾಡ 07 : ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ನಗರದ ಪ್ರಸನ್ನಕುಮಾರ ಜೋಶಿ ಅವರಿಗೆ ಅಮೇರಿಕೆಯ ಫ್ಲೋರಿಡಾದ ಯೋಗ-ಸಂಸ್ಕೃತಮ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. ಇತ್ತೀಚೆಗೆ ಮಂತ್ರಾಲಯದ ಶ್ರೀ ಗುರುಸಾರ್ವಭೌಮ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ ಜರುಗಿದ ವಿಶೇಷ ಘಟಿಕೋತ್ಸವದಲ್ಲಿ ಡಾ. ಸುಬುಧೇಂದ್ರ ತೀರ್ಥ ಸ್ವಾಮಿಜಿಯವರು ಈ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿದರು.
ಕಳೆದ ಸುಮಾರು 26 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಪ್ರಾಯೋಗಿಕ ವಿಜ್ಞಾನ ಮಾದರಿಯ ಕಲಿಕೆ, ವಿವಿಧ ಕಲಿಕಾ ಪುಸ್ತಕಗಳ ಪ್ರಕಟಣೆ, ಇ-ಆಡಳಿತ ಇಲಾಖೆಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಯುಷ್ಠಾನ ಭಾರತ್, ಆರೋಗ್ಯ ಕರ್ನಾಟಕ ಯೋಜನೆಗೆ ಸಾರ್ವಜನಿಕರ ನೋಂದಣಿ, ವಿದ್ಯುತ್ ಉನ್ನತಿ ಪ್ರೊಜೆಕ್ಟ, ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಕಾರ್ಮಿಕ ಕಾರ್ಡ ನೋಂದಣಿ ಹಾಗೂ ವಿತರಣೆ ಸೇರಿದಂತೆ ಹಲವಾರು ಜನಪರ ಸೇವೆಗಳಲ್ಲಿ ತಮ್ಮನ್ನೇ ತಾವು ತೊಡಗಿಸಿಕೊಂಡು ಸೇವೆಸಲ್ಲಿಸಿರುವ ನಗರದ ಪ್ರಸನ್ನಕುಮಾರ ಜೋಶಿ ಅವರನ್ನು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 